ಪೊಲೀಸರೇ ಅಪರಾಧದಲ್ಲಿ ಭಾಗಿಯಾದರೆ ಸಾರ್ವಜನಿಕರ ರಕ್ಷಣೆ ಹೇಗೆ?:  ಅರಗ ಜ್ಞಾನೇಂದ್ರ  ಪ್ರಶ್ನೆ - Mahanayaka

ಪೊಲೀಸರೇ ಅಪರಾಧದಲ್ಲಿ ಭಾಗಿಯಾದರೆ ಸಾರ್ವಜನಿಕರ ರಕ್ಷಣೆ ಹೇಗೆ?:  ಅರಗ ಜ್ಞಾನೇಂದ್ರ  ಪ್ರಶ್ನೆ

araga jnanendra
18/05/2022

ಬೆಂಗಳೂರು: ಅಪರಾಧ ಪತ್ತೆ ಹಚ್ಚುವವರೆ ಅಪರಾಧ ಚಟುವಟಿಕೆ ಗಳಲ್ಲಿ ಭಾಗಿಯಾಗುವುದಾದರೆ ಸಾರ್ವಜನಿಕರ ರಕ್ಷಣೆ ಹೇಗೆ ಸಾಧ್ಯ ಎಂದು ಗೃಹ ಸಚಿವ ಅರಗಜ್ಞಾನೇಂದ್ರ  ಪೊಲೀಸ್ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಅಪರಾಧಿಗಳನ್ನು ಹಿಡಿಯಬೇಕಾದ ಪೊಲೀಸರು, ಅಪರಾಧಗಳಲ್ಲಿ ಭಾಗಿಯಾಗುವುದನ್ನು ಸಹಿಸುವುದಿಲ್ಲ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ಜೀವ ರಕ್ಷಣೆ ಹೊಣೆ ಹೊತ್ತಿರುವ ಪೊಲೀಸರು, ಆ ನಿಟ್ಟಿನಲ್ಲಿ ಹೊಣೆಗಾರಿಕೆಯನ್ನು ನಿಭಾಯಿಸಬೇಕು. ಪಿಎಸ್‌ ಐ ಅಕ್ರಮ ನೇಮಕಾತಿಯಲ್ಲಿ ತನಿಖೆ ನಡೆಸುತ್ತಿರುವ ವಿಷಯದಲ್ಲಿ ಹೆಚ್ಚು ಮಂದಿ ಪೊಲೀಸ್ ಅಧಿಕಾರಿಗಳ ಪಾತ್ರವಿರುವ ಬಗ್ಗೆ ಪ್ರಸ್ತಾಪಿಸಿ, ವಿಷಾದಿಸಿದ ಸಚಿವರು, ಅಪರಾಧ ಪತ್ತೆ ಹಚ್ಚುವವರೆ ಅಪರಾಧ ಚಟುವಟಿಕೆ ಗಳಲ್ಲಿ ಭಾಗಿಯಾಗುವುದಾದರೆ ಸಾರ್ವಜನಿಕರ ರಕ್ಷಣೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು,  ಸಾರ್ವಜನಿಕರು ಇಲಾಖೆಯ ಮೇಲೆ ಹೊಂದಿರುವ ಗೌರವ ಹಾಗೂ ನಂಬಿಕೆಯನ್ನು ಕಾಪಾಡಬೇಕು  ಎಂದು ಅಧಿಕಾರಿಗಳಿಗೆ ಕರೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ತೊರೆಯುವ ಮೊದಲು ಹಾರ್ದಿಕ್ ಪಟೇಲ್ ಹೈಕಮಾಂಡ್ ಗೆ ಹೇಳಿದ್ದೇನು?

ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ನಾಳೆ ಎಷ್ಟು ಗಂಟೆಗೆ ಪ್ರಕಟವಾಗಲಿದೆ?: ಇಲ್ಲಿದೆ ಮಾಹಿತಿ

32 ವರ್ಷಗಳ ಜೈಲು ಶಿಕ್ಷೆಯ ಬಳಿಕ ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ ಬಿಡುಗಡೆ

ಟೆಸ್ಟ್ ಡ್ರೈವ್ ಮಾಡಿ ಬರುತ್ತೇನೆಂದು ಹೋದವ ಕಾರಿನೊಂದಿಗೆ ಪರಾರಿ!: ಶೋರೂಂ ಸಿಬ್ಬಂದಿ ಕಂಗಾಲು

ಇತ್ತೀಚಿನ ಸುದ್ದಿ