10:14 AM Wednesday 9 - September 2026

ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ; ತನಿಖೆ ಮತ್ತು ಭದ್ರತೆ ನೀಡಲು ಕೋರ್ಟ್ ಆದೇಶ

prajwal revanna
21/08/2026

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಪ್ರಮುಖ ಸಾಕ್ಷಿಯೊಬ್ಬರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಗಂಭೀರ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕ್ಷಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಸ್‌ ಐಟಿ (ವಿಶೇಷ ತನಿಖಾ ತಂಡ) ಗೆ ಆದೇಶಿಸಿದೆ.

ಹೊಳೆನರಸೀಪುರ ಮೂಲದ ಮಹಿಳೆಯೊಬ್ಬರು ಈ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದಾರೆ. ನ್ಯಾಯಾಲಯದಲ್ಲಿ ತಮ್ಮ ಸಾಕ್ಷ್ಯವನ್ನು ನೀಡಿದ ಬಳಿಕ, ಅಪರಿಚಿತ ವ್ಯಕ್ತಿಗಳಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದಾರೆ. ತಮಗೆ ಅಥವಾ ತಮ್ಮ ಮಗನಿಗೆ ಏನಾದರೂ ಅಪಾಯ ಸಂಭವಿಸಿದರೆ, ಅದಕ್ಕೆ ಪ್ರಕರಣದ ಆರೋಪಿಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಅವರು ಕೋರ್ಟ್‌ಗೆ ತಿಳಿಸಿದ್ದಾರೆ.

ಸಾಕ್ಷಿದಾರರ ಅಳಲನ್ನು ಗಂಭೀರವಾಗಿ ಪರಿಗಣಿಸಿರುವ ವಿಶೇಷ ನ್ಯಾಯಾಲಯವು, ಈ ಬೆದರಿಕೆ ಕರೆಗಳ ಬಗ್ಗೆ ಕೂಡಲೇ ಸಮಗ್ರ ತನಿಖೆ ನಡೆಸುವಂತೆ ಎಸ್‌ಐಟಿ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಅಲ್ಲದೆ, ಮುಂಬರುವ ವಿಚಾರಣೆಯ ದಿನಾಂಕದೊಳಗೆ ವರದಿಯನ್ನು ಸಲ್ಲಿಸುವಂತೆ ಮತ್ತು ಸಾಕ್ಷಿಗೆ ಕಾನೂನುಬದ್ಧವಾಗಿ ಅಗತ್ಯವಿರುವ ಎಲ್ಲ ಪೊಲೀಸ್ ಭದ್ರತೆಯನ್ನು ತಕ್ಷಣವೇ ಒದಗಿಸುವಂತೆ ಆದೇಶಿಸಿದೆ.

ಈ ಪ್ರಕರಣವು 2019-2021ರ ಅವಧಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದ್ದು, ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ವಿವಿಧ ಸೆಕ್ಷನ್‌ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version