ಪ್ರಜ್ವಲ್ ರನ್ನು ದೇವೇಗೌಡರೇ ವಿದೇಶಕ್ಕೆ ಕಳುಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

siddaramaiah
01/05/2024

ಯಾದಗಿರಿ:  ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇವೇಗೌಡರೇ ಯೋಜನೆ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್​ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, , ವೀಸಾ ಕೊಡುವುದು ಯಾರು? ಕೇಂದ್ರದ ಬಿಜೆಪಿಯವರೇ ತಾನೇ ಎಂದು ಪ್ರಶ್ನಿಸಿದರಲ್ಲದೇ, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿ.ಕೆ.ಶಿವಕುಮಾರ್​ ಗೂ ಯಾವುದೇ  ಸಂಬಂಧ ಇಲ್ಲ ಎಂದರು.

ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ? ಕುಮಾರಸ್ವಾಮಿ ಜೊತೆಗೂ ಡಿ.ಕೆ.ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್.​ಡಿ.ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ? ಎಂದು ಪ್ರಶ್ನಿಸಿದರು.
ಪೆನ್​ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್​ ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್ ​​ಡಿಕೆ ಕೇವಲ ರಾಜಕಾರಣಕ್ಕಾಗಿ ಡಿ.ಕೆ.ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ಯಾಕೆ ಟಿಕೆಟ್ ಕೊಟ್ಟರು?:

ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಪ್ರಜ್ವಲ್ ಗೆ ಯಾಗೆ ಟಿಕೆಟ್ ನೀಡಿದರು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ,  ಈ ಪ್ರಕರಣದ ತನಿಖೆ ಎಸ್ ಐಟಿಗೆ ತನಿಖೆಗೆ ನೀಡಲಾಗಿದೆ. ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ ಎಂದು ಅವರು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version