ನೀವಾರಿಗಾದಿರೋ ಬಿಜೆಪಿ ಸಂಸದರೇ?: ಬಿಜೆಪಿ ಸಂಸದರ ವೈಫಲ್ಯ ಪಟ್ಟಿ ಮಾಡಿದ ಪ್ರಿಯಾಂಕ್ ಖರ್ಗೆ - Mahanayaka

ನೀವಾರಿಗಾದಿರೋ ಬಿಜೆಪಿ ಸಂಸದರೇ?: ಬಿಜೆಪಿ ಸಂಸದರ ವೈಫಲ್ಯ ಪಟ್ಟಿ ಮಾಡಿದ ಪ್ರಿಯಾಂಕ್ ಖರ್ಗೆ

priyank kharge
08/04/2024

ಇಟ್ಟರೆ ಸಗಣಿಯಾದೆ ತಟ್ಟಿದರೆ ಕುರುಳಾದೆ, ಸುಟ್ಟರೇ ನೊಸಲಿಗೆ ವಿಭೂತಿಯಾದೆ ತಟ್ಟದೇ ಹಾಕಿದರೆ ಮೇಲುಗೊಬ್ಬರವಾದೆ, ಆದರೆ ನೀವಾರಿಗಾದಿರೋ ಬಿಜೆಪಿ ಸಂಸದರೇ? ಎಂದು  ಬಿಜೆಪಿ ಸಂಸದರಿಗೆ ಸಂಸದ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.


Provided by

ಸಾಮಾಜಿಕ ಜಾಲತಾಣಗಳಲ್ಲಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರಿಯಾಂಕ್ ಖರ್ಗೆ ಬಿಜೆಪಿ ಸಂಸದರ ನಿರ್ಲಕ್ಷ್ಯಗಳನ್ನು ಹೀಗೆ ಪಟ್ಟಿ ಮಾಡಿದ್ದಾರೆ.

*  ನೆರೆ ಬಂದಾಗ ಯಡಿಯೂರಪ್ಪನವರು ವೇದಿಕೆ ಮೇಲೆಯೇ ನೆರೆ ಪರಿಹಾರಕ್ಕೆ ಪ್ರಧಾನಿಗೆ ಆಗ್ರಹಿಸಿದ್ದಾಗಲೂ ಬಿಜೆಪಿ ಸಂಸದರು ಕರ್ನಾಟಕದ ಪರ ಬಾಯಿ ಬಿಡಲಿಲ್ಲ.


Provided by

*  GST ಪರಿಹಾರ, ವಿಶೇಷ ಅನುದಾನದಲ್ಲಿನ ಅನ್ಯಾಯದ ಕುರಿತು ಬೊಮ್ಮಾಯಿಯವರು ಮಾತಾಡಿದಾಗಲೂ ಬಿಜೆಪಿ ಸಂಸದರು ಬಾಯಿ ಬಿಡಲಿಲ್ಲ.

*  ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕವನ್ನು ಕಡೆಗಣಿಸಿದಾಗಲೂ ಬಿಜೆಪಿ ಸಂಸದರು ತುಟಿ ಬಿಚ್ಚಲಿಲ್ಲ.

*  ಕೋವಿಡ್ ಸಮಯದಲ್ಲಿ ಆಕ್ಸಿಜನ್, ರೆಮಿಡಿಸಿವಿರ್, ವ್ಯಾಕ್ಸಿನ್ ಹಂಚಿಕೆಯಲ್ಲಿ ರಾಜ್ಯವನ್ನು ಕಡೆಗಣಿಸಿದಾಗಲೂ ಬಿಜೆಪಿ ಸಂಸದರು ಮಾತಾಡಲಿಲ್ಲ.

*  ಯಾವುದೇ ವಿಷಯದಲ್ಲೂ ಕರ್ನಾಟಕದ ಪರವಾಗಿ ಸಂಸದರ ನಿಯೋಗ ಕೇಂದ್ರ ಸರ್ಕಾರವನ್ನು ಭೇಟಿಯಾದ ಉದಾಹರಣೆಯೇ ಇಲ್ಲ.

*   ಈಗ ಭೀಕರ ಬರ ಎದುರಿಸುತ್ತಿರುವ ರಾಜ್ಯಕ್ಕೆ ಬರ ಪರಿಹಾರ ಕೇಳುವುದಕ್ಕೂ ಬಿಜೆಪಿ ಸಂಸದರ ಧ್ವನಿ ಇಲ್ಲ.

ಜಗತ್ತಿನಲ್ಲಿ ಪ್ರತಿ ವಸ್ತುವೂ ಒಂದಿಲ್ಲೊಂದು ಉಪಯೋಗಕ್ಕೆ ಬರುತ್ತವೆ, ಆದರೆ ಯಾವುದೇ ಪ್ರಯೋಜನಕ್ಕೆ ಬಾರದ ಬಿಜೆಪಿ ಸಂಸದರು ಕನ್ನಡಿಗರ ಪಾಲಿಗೆ ಇದ್ದೂ ಇಲ್ಲದಂತಿರುವ ನಿರುಪಯೋಗಿ ಜೀವಿಗಳು! ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ