2:06 PM Saturday 18 - October 2025

ಪ್ರಚೋದನಾಕಾರಿ ಪೋಸ್ಟ್: ಬಿಜೆಪಿ ಮುಖಂಡರು ಸೇರಿದಂತೆ ಐವರ ವಿರುದ್ಧ ಸುಮೋಟೋ ಕೇಸ್

chikkamagaluru
18/10/2025

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಿನ್ನೆಲೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ಹಾಸನ ವಿಭಾಗದ ಬಜರಂಗದಳ ಸಹ ಸಂಚಾಲಕನ  ಮೇಲೆ ದೂರು ದಾಖಲಾಗಿದೆ.

ಸಂತೋಷ್, ಶಾಮ್ ಸೇರಿ ಒಟ್ಟು ಐವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರ ಪೊಲೀಸರು  ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

ಗೋ ಹತ್ಯೆ ಖಂಡಿಸಿ ಮೊನ್ನೆ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಗೋ‌ ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಖಡ್ಗದ ಚಿತ್ರ ಬಳಸಿ  ಬಲಿಗೆ ಹಸಿದಿಹ ಶಸ್ತ್ರ ಹಿಡಿಯುತ ಗೋ  ಹಂತಕರೆದೆಯ ಸೀಳಿರಿ, ಗೋಮಾತೆ ರಕ್ಷಣೆಗೆ ಹಿಂದುಗಳೇ ಒಂದಾಗಿ ಬನ್ನಿ ಎಂದು ಪ್ರಚೋದನಾಕಾರಿ ಪೋಸ್ಟ್‌ ಹಂಚಿಕೊಳ್ಳಲಾಗಿತ್ತು. ಪ್ರತಿಭಟನೆಗೆ ಕರೆ ನೀಡಿದಾಗ ಈ ಪೋಸ್ಟ್ ಹಾಕಿಕೊಂಡಿದ್ದವರ ವಿರುದ್ಧ  ಚಿಕ್ಕಮಗಳೂರು ನಗರ ಠಾಣಾ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version