ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಗೆ ಜೈಲೇ ಗತಿ - Mahanayaka
1:48 AM Thursday 16 - October 2025

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಗೆ ಜೈಲೇ ಗತಿ

psi arjun
08/09/2021

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿ ಚಿತ್ರ ಹಿಂಸೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಪಿಎಸ್ ಐ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು  ಚಿಕ್ಕಮಗಳೂರು 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ವಜಾಗೊಳಿಸಿದ್ದಾರೆ ಎಂದು ವರದಿಯಾಗಿದೆ.


Provided by

ಗೋಣಿಬೀಡು ಪಿಎಸ್ ಐ ಆಗಿದ್ದ ಅರ್ಜುನ್ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ದಲಿತ ಯುವಕನನ್ನು ಬಂಧಿಸಿರುವುದೇ ಅಲ್ಲದೇ ಠಾಣೆಯಲ್ಲಿ ಚಿತ್ರ ಹಿಂಸೆ ನೀಡಿ, ಮತ್ತೋರ್ವ ಆರೋಪಿಯ ಮೂತ್ರವನ್ನು ಕುಡಿಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತ್ತುಗೊಂಡಿದ್ದ ಅರ್ಜುನ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ತಲೆ ಮರೆಸಿಕೊಂಡಿದ್ದ.

ಇನ್ನೊಂದೆಡೆ ಕರ್ನಾಟಕ  ಹೈಕೋರ್ಟ್ ನಲ್ಲಿ ಕೂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ಆದರೆ ಈ ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಪೊಲೀಸರು ಅರ್ಜನ್ ನನ್ನು ಬಂಧಿಸಿ, ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ  ನ್ಯಾಯಾಲಯವು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ನಡುವೆ ಸಿಐಡಿ ಪೊಲೀಸರು ಕೂಡ ನ್ಯಾಯಾಲಯದ ಒಪ್ಪಿಗೆ ಪಡೆದು ಒಂದು ದಿನದ ಮಟ್ಟಿಗೆ ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ನಡುವೆ ಆರೋಪಿ ಅರ್ಜುನ್ ಮಂಗಳವಾರ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ನ್ಯಾಯಾಲಯ ತೀರ್ಪು ನೀಡಿದೆ. ಜಾಮೀನು ಅರ್ಜಿಯ ವಿಚಾರಣೆ ವೇಳೆ ಸಂತ್ರಸ್ತ ಯುವಕನ ಪರವಾಗಿ ಸರ್ಕಾರಿ ಅಭಿಯೋಜಕಿ ಭಾವನ ಹಾಗೂ ಖಾಸಗಿ ವಕೀಲ ಪರಮೇಶ್ವರ್ ವಾದ ಮಂಡಿಸಿದರು.

ಇನ್ನಷ್ಟು ಸುದ್ದಿಗಳು…

ಮನು ಕುಲವನ್ನೇ ಬೆಚ್ಚಿ ಬೀಳಿಸಿದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ | ಅರ್ಜುನ್ ಎಂಬ ವಿಕೃತ PSI ತಲೆದಂಡವಾಗಲೇಬೇಕು

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ತಲೆಮರೆಸಿಕೊಂಡಿದ್ದ ಪಿಎಸ್ ಐ ಅರ್ಜುನ್ ನನ್ನು ಬಂಧಿಸಿದ ಸಿಐಡಿ ಪೊಲೀಸರು

ಮಹಿಳೆಯನ್ನು ಕೊಂದು ಅಡುಗೆ ಮನೆಯಲ್ಲಿಯೇ ಸುಟ್ಟ ಲಿವ್ ಇನ್ ಪಾಟ್ನರ್!

ಬ್ರಾಹ್ಮಣರು ಹಾಗೂ ದಲಿತರು ಒಂದಾಗಬೇಕು | ಬಿಎಸ್ ಪಿ ವರಿಷ್ಠೆ ಮಾಯಾವತಿ ಕರೆ

ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಹೆಚ್ಚಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈಅಲಾರ್ಟ್

 

ಇತ್ತೀಚಿನ ಸುದ್ದಿ