ದರೋಡೆ ಮಾಡಿ ಎಸ್ಕೇಪ್ ಆಗ್ತಿದ್ರು: ಸಿನಿಮೀಯ ರೀತಿಯಲ್ಲಿ ದರೋಡೆಕೋರರನ್ನು ಅರೆಸ್ಟ್ ಮಾಡಿದ ಖಾಕಿ ಪಡೆ

15/07/2024

ಪಟಿಯಾಲ ಜಿಲ್ಲೆಯ ರಾಜ್ಪುರ ಬಳಿ ನಡೆದ ಎರಡು ಗುಂಡಿನ ದಾಳಿ ಘಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ ಇಬ್ಬರು ದರೋಡೆಕೋರರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ರಾಜ್ಪುರ-ಪಟಿಯಾಲ ಟೋಲ್ ಪ್ಲಾಜಾದಲ್ಲಿ ಮತ್ತು ರಾಜ್ಪುರದ ಮದ್ಯದಂಗಡಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳನ್ನು ದೀಪಕ್ ಮತ್ತು ರಮಣ್ ದೀಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಮೊಹಾಲಿಯಿಂದ ಬರುತ್ತಿದ್ದಾಗ ಪೊಲೀಸ್ ತಂಡವು ಅವರನ್ನು ತಡೆದಿದೆ. ಆದರೆ ಬಂಧನದಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಅವರು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ್ದಾರೆ.

ಪಂಜಾಬ್ ಪೊಲೀಸರು ದೀಪಕ್ ಮತ್ತು ರಮಣ್ ದೀಪ್ ಸಿಂಗ್ ಅವರನ್ನು ಕಾಲಿಗೆ ಶೂಟೌಟ್ ಮಾಡಿ ಗಾಯ ಮಾಡಿ ಬಂಧಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಜ್ಪುರ-ಪಟಿಯಾಲ ಟೋಲ್ ಪ್ಲಾಜಾ ಮತ್ತು ರಾಜ್ಪುರದ ಮದ್ಯದಂಗಡಿಯಲ್ಲಿ ನಿನ್ನೆ ತಡರಾತ್ರಿ ನಡೆದ ಎರಡು ಗುಂಡಿನ ದಾಳಿ ಘಟನೆಗಳಲ್ಲಿ ಭಾಗಿಯಾಗಿದ್ದ ಇಬ್ಬರು ದರೋಡೆಕೋರರನ್ನು ಪಟಿಯಾಲ ಪೊಲೀಸರು ರಾಜ್ಪುರದಲ್ಲಿ ಬಂಧಿಸಿದ್ದಾರೆ ಎಂದು ಅವರು ಪೊಲೀಸರು ಟ್ವೀಟ್ ಮಾಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version