ಕೇದಾರನಾಥ ದೇವಸ್ಥಾನದಲ್ಲಿ ರಾಹುಲ್ ಗಾಂಧಿ, ವರುಣ್‌ಗಾಂಧಿ ಮುಖಾಮುಖಿ: 'ಕೈ' ಪಾಳಯ ಸೇರುತ್ತಾರ ಬಿಜೆಪಿ ಸಂಸದ..? - Mahanayaka

ಕೇದಾರನಾಥ ದೇವಸ್ಥಾನದಲ್ಲಿ ರಾಹುಲ್ ಗಾಂಧಿ, ವರುಣ್‌ಗಾಂಧಿ ಮುಖಾಮುಖಿ: ‘ಕೈ’ ಪಾಳಯ ಸೇರುತ್ತಾರ ಬಿಜೆಪಿ ಸಂಸದ..?

08/11/2023


Provided by

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಸೋದರಸಂಬಂಧಿಯಾಗಿರುವ ಉತ್ತರ ಪ್ರದೇಶದ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಕೇದಾರನಾಥ ದೇವಸ್ಥಾನದಲ್ಲಿ ಪರಸ್ಪರ ಭೇಟಿಯಾಗಿದ್ದಾರೆ.

ರಾಹುಲ್ ಗಾಂಧಿ ಕಳೆದ ಮೂರು ದಿನಗಳಿಂದಲೂ ಕೇದಾರನಾಥದಲ್ಲಿದ್ದಾರೆ. ಈ ಮಧ್ಯೆ ವರುಣ್ ಗಾಂಧಿ ಕೂಡ ತಮ್ಮ ಕುಟುಂಬ ಸಹಿತ ಅಲ್ಲಿಗೆ ಭೇಟಿ ನೀಡಿದ್ದರು. ಇದೇ ವೇಳೆ ರಾಹುಲ್ ಗಾಂಧಿ ಮತ್ತು ವರುಣ್ ಗಾಂಧಿ ಇಬ್ಬರೂ ದೇವಸ್ಥಾನದ ಹೊರಗೆ ಭೇಟಿಯಾಗಿದ್ದಾರೆ ಮತ್ತು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕವಾಗಿ ಅಪರೂಪಕ್ಕೆ ಒಟ್ಟಿಗೆ ಕಾಣಿಸಿಕೊಳ್ಳುವ ಈ ಸೋದರ ಸಂಬಂಧಿಗಳ ನಡುವಿನ ಭೇಟಿಯು ವರುಣ್ ಗಾಂಧಿಯವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಬಹುದು ಎಂಬ ಊಹಾಪೋಹಗಳನ್ನು ಹುಟ್ಟುಹಾಕಿದೆ. ವರುಣ್ ಗಾಂಧಿ ಅವರು ಇತ್ತೀಚಿನ ತಿಂಗಳುಗಳಲ್ಲಿ ಬಿಜೆಪಿಯ ಪ್ರಮುಖ ಸಭೆಗಳಲ್ಲಿ ಕಾಣಿಸಿಕೊಂಡಿಲ್ಲ. ಅಲ್ಲದೇ ಹಲವು ಕಡೆಗಳಲ್ಲಿ ಬಿಜೆಪಿ ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ.

ಸಂಜಯ್ ಗಾಂಧಿ ಮತ್ತು ಮೇನಕಾ ಗಾಂಧಿ ಅವರ ಪುತ್ರ ವರುಣ್ ಗಾಂಧಿ ಇತ್ತೀಚಿನ ತಿಂಗಳುಗಳಲ್ಲಿ ಪ್ರಮುಖ ಬಿಜೆಪಿ ಸಭೆಗಳಲ್ಲಿ ಕಾಣಿಸಿಕೊಂಡಿಲ್ಲ ಮತ್ತು ಈಗ ರದ್ದುಪಡಿಸಲಾದ ಕೃಷಿ ಕಾನೂನುಗಳು ಸೇರಿದಂತೆ ನಿರ್ಣಾಯಕ ವಿಷಯಗಳ ಬಗ್ಗೆ ಅವರ ಹೇಳಿಕೆಗಳು ಕೆಲವೊಮ್ಮೆ ಪಕ್ಷದ ನಿಲುವಿಗೆ ಭಿನ್ನವಾಗಿವೆ

ಇತ್ತೀಚಿನ ಸುದ್ದಿ