ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಸ್ಪರ್ಧೆ: ಅಮೇಥಿಯಿಂದ ಕೆಎಲ್ ಶರ್ಮಾ ಕಣಕ್ಕೆ

03/05/2024

ರಾಹುಲ್ ಗಾಂಧಿ ಅವರ ಉಮೇದುವಾರಿಕೆ ಕುರಿತು ದೀರ್ಘಕಾಲದಿಂದ ಇದ್ದ ಸಸ್ಪೆನ್ಸ್ ಗೆ ಕಾಂಗ್ರೆಸ್ ಇಂದು ತೆರೆ ಎಳೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅಮೇಥಿ ಮತ್ತು ರಾಯ್ ಬರೇಲಿಯ ನಾಮನಿರ್ದೇಶನ ಪ್ರಕ್ರಿಯೆ ಇಂದು ಕೊನೆಗೊಳ್ಳುತ್ತಿದ್ದಂತೆ ಈ ಪ್ರಕಟಣೆ ಹೊರಬಿದ್ದಿದೆ. ಸ್ಮೃತಿ ಇರಾನಿ ವಿರುದ್ಧ ಅಮೇಥಿಯಿಂದ ಕೆಎಲ್ ಶರ್ಮಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಅಮೇಥಿ ಮತ್ತು ರಾಯ್ ಬರೇಲಿಯನ್ನು ಗಾಂಧಿ-ನೆಹರೂ ಕುಟುಂಬದ ಸಾಂಪ್ರದಾಯಿಕ ಪಾಕೆಟ್ ಬರೋಗಳು ಎಂದು ಪರಿಗಣಿಸಲಾಗಿದೆ. ಯಾಕೆಂದರೆ ಅದರ ಸದಸ್ಯರು ಹಲವಾರು ದಶಕಗಳಿಂದ ಈ ಸ್ಥಾನಗಳನ್ನು ಪ್ರತಿನಿಧಿಸಿದ್ದಾರೆ.

ಈ ಹಿಂದೆ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿದ್ದವು. ಆದರೆ ಕಾಂಗ್ರೆಸ್‌ನ ಅಂತಿಮ ಪ್ರಕಟಣೆಗಾಗಿ ಕಾಯಲಾಗುತ್ತಿತ್ತು. ಈ ಕುರಿತು ಯಾರೂ ಹೆದರುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಅಮೇಥಿ ಮತ್ತು ರಾಯ್ ಬರೇಲಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಿದೆ ಎಂದು ಅವರು ಹೇಳಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version