10:57 AM Saturday 31 - January 2026

ಡಿಸೆಂಬರ್ 23ರಂದು ಪರ್ಭಾನಿಗೆ ರಾಹುಲ್ ಗಾಂಧಿ ಭೇಟಿ: ‘ನಾಟಕ’ ಎಂದು ಕರೆದ ಬಿಜೆಪಿ

22/12/2024

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಮಹಾರಾಷ್ಟ್ರದ ಪರ್ಭಾನಿ ನಗರಕ್ಕೆ ಭೇಟಿ ನೀಡಲಿದ್ದು, ಈ ತಿಂಗಳ ಆರಂಭದಲ್ಲಿ ಹಿಂಸಾಚಾರದಲ್ಲಿ ಸಾವನ್ನಪ್ಪಿದ ಇಬ್ಬರು ವ್ಯಕ್ತಿಗಳ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ.
ರಾಜ್ಯ ಬಿಜೆಪಿ ರಾಹುಲ್ ಗಾಂಧಿ ಅವರ ಭೇಟಿಯನ್ನು “ನಾಟಕ” ಎಂದು ಕರೆದಿದೆ.

ಡಿಸೆಂಬರ್ 10 ರಂದು ಸಂಜೆ ಮರಾಠಾವಾಡಾ ಪ್ರದೇಶದಲ್ಲಿರುವ ನಗರದ ರೈಲ್ವೆ ನಿಲ್ದಾಣದ ಹೊರಗಿನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಯ ಬಳಿ ಗಾಜಿನ ಆವೃತ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿದ ನಂತರ ಪರ್ಭಾನಿ ಹಿಂಸಾಚಾರಕ್ಕೆ ಸಾಕ್ಷಿಯಾಯಿತು. ಕಾಂಗ್ರೆಸ್ ಮುಖಂಡ ವಿಜಯ್ ವಾಡೆಟ್ಟಿವಾರ್ ಹಂಚಿಕೊಂಡ ವೇಳಾಪಟ್ಟಿಯ ಪ್ರಕಾರ, ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ಅಂಬೇಡ್ಕರ್ ವಾದಿಗಳಾದ ಸೋಮನಾಥ್ ಸೂರ್ಯವಂಶಿ ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸುವಾಗ ಸಾವನ್ನಪ್ಪಿದ ವಿಜಯ್ ವಾಕೋಡೆ ಅವರ ಕುಟುಂಬಗಳನ್ನು ರಾಹುಲ್ ಗಾಂಧಿ ಭೇಟಿ ಮಾಡಲಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version