ಇಂದಿನಿಂದ ಈ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತಗ್ಗಲಿದೆ!: ಎಲ್ಲೆಲ್ಲಿ ಮಳೆಯಾಗಲಿದೆ?

ಬೆಂಗಳೂರು: ಕಳೆದ ಹಲವು ದಿನಗಳಿಂದ ನಿರಂತರ ಮಳೆಯಿಂದ ಕರ್ನಾಟಕದ ವಿವಿಧ ಜಿಲ್ಲೆಯ ಜನರು ತತ್ತರಿಸಿದ್ದರು. ಇಂದಿನಿಂದ ಮಳೆಯ ಪ್ರಮಾಣ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಾಗುವ ಸಾಧ್ಯತೆ ಇದೆ.
ಆದರೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಜೂನ್ 25ರವರೆಗೆ ಸಾಧಾರಣ ಮಳೆಯಾಗಲಿದೆ.
ಉಪ್ಪಿನಂಗಡಿ, ಮೂಡುಬಿದಿರೆ, ಕ್ಯಾಸಲ್ ರಾಕ್, ಕೊಟ್ಟಿಗೆಹಾರ, ಭಾಗಮಂಡಲ, ಕಾರ್ಕಳ, ಬೆಳ್ತಂಗಡಿ, ಲೋಂಡಾ, ಧರ್ಮಸ್ಥಳ, ಕಾರ್ಕಳ, ಕಳಸ, ಸುಳ್ಯ, ಕಮ್ಮರಡಿ, ಶೃಂಗೇರಿ, ನಾಪೋಕ್ಲು, ಬಂಟ್ವಾಳ, ಸಿದ್ದಾಪುರ, ಪುತ್ತೂರು, ಮಾಣಿ, ಗೇರುಸೊಪ್ಪ, ಶಕ್ತಿನಗರ, ಮುಲ್ಕಿ, ಜಯಪುರ, ಸೋಮವಾರಪೇಟೆ, ಎನ್ಆರ್ಪುರ, ಭದ್ರಾವತಿ, ಅಂಕೋಲಾ, ಯಲ್ಲಾಪುರ, ಕುಮಟಾ, ಹಾರಂಗಿ, ಮಂಕಿ, ತರಿಕೆರೆ, ಅರಕಲಗೂಡು, ಹೊನ್ನಾಳಿ, ಶಿವಮೊಗ್ಗ, ಹಾವೇರಿ, ಬೆಳಗಾವಿಯಲ್ಲಿ ಮಳೆಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD