12:49 AM Thursday 21 - August 2025

ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕಾಗಿ ರಾಜಸ್ಥಾನದ ವ್ಯಕ್ತಿಯನ್ನು ಕೊಲೆ ಮಾಡಿದ ಇಬ್ಬರು ಸ್ನೇಹಿತರು: ಕೊಳದಲ್ಲಿ ಶವ ಪತ್ತೆ..!

08/03/2024

ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಕ್ಕಾಗಿ 40 ವರ್ಷದ ವ್ಯಕ್ತಿಯನ್ನು ಒಂಬತ್ತು ದಿನಗಳ ಹಿಂದೆ ಕೊಲೆ ಮಾಡಿ ಶವವನ್ನು ಒಣಗಿದ ಕೊಳದಲ್ಲಿ ಎಸೆಯಲಾಗಿದೆ ಎಂದು ರಾಜಸ್ಥಾನದ ಬರಾನ್ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ಇನ್ನೊಬ್ಬನನ್ನು ಬಂಧಿಸುವ ವೇಳೆ ಆತ ಭಯದಿಂದ ವಿಷಕಾರಿ ವಸ್ತುವನ್ನು ಸೇವಿಸಿದ ನಂತರ ಪೊಲೀಸ್ ಭದ್ರತೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆಬ್ರವರಿ 26 ರಂದು ಬರಾನ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಓಂ ಪ್ರಕಾಶ್ ಬೈರ್ವಾ ಶವವಾಗಿ ಪತ್ತೆಯಾಗಿದ್ದಾರೆ ಎಂದು ಬರಾನ್ ಪೊಲೀಸ್ ವರಿಷ್ಠಾಧಿಕಾರಿ ರಾಜ್ ಕುಮಾರ್ ಚೌಧರಿ ತಿಳಿಸಿದ್ದಾರೆ.
ತಾಂತ್ರಿಕ ತನಿಖೆ ಮತ್ತು ವಿಚಾರಣೆಯ ಆಧಾರದ ಮೇಲೆ ಪೊಲೀಸರು ಬರಾನ್ ನಗರದ ನಿವಾಸಿಗಳಾದ ಮುರಳೀಧರ್ ಪ್ರಜಾಪತಿ (32) ಮತ್ತು ಸುರೇಂದ್ರ ಯಾದವ್ ಎಂಬ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.
ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ ಇವರು ಪ್ರಜಾಪತಿ ಕೊಲೆಯನ್ನು ಒಪ್ಪಿಕೊಂಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version