ನಳಿನಿ ಶ್ರೀಹರನ್ ಸಹಿತ ರಾಜೀವ್ ಗಾಂಧಿ ಹತ್ಯೆಯ 6 ಆರೋಪಿಗಳ ಬಿಡುಗಡೆ: ಸ್ಟಾಲಿನ್ ಸ್ವಾಗತ - Mahanayaka

ನಳಿನಿ ಶ್ರೀಹರನ್ ಸಹಿತ ರಾಜೀವ್ ಗಾಂಧಿ ಹತ್ಯೆಯ 6 ಆರೋಪಿಗಳ ಬಿಡುಗಡೆ: ಸ್ಟಾಲಿನ್ ಸ್ವಾಗತ

12/11/2022

ಚೆನ್ನೈ: ನಳಿನಿ ಶ್ರೀಹರನ್ ಸೇರಿದಂತೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸ್ವಾಗತಿಸಿದ್ದಾರೆ.


Provided by

‘ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ, ಜನರಿಂದ ಆಯ್ಕೆಯಾದ ಸರ್ಕಾರದ ನಿರ್ಧಾರಗಳು ಮತ್ತು ನಿರ್ಧಾರಗಳನ್ನು ರಾಜ್ಯಪಾಲರು ನೇಮಿಸಿದ ಸ್ಥಾನಗಳಲ್ಲಿ ಕೈಬಿಡಬಾರದು ಎಂಬುದಕ್ಕೆ ಸುಪ್ರೀಂ ಕೋರ್ಟ್‌ನ ಈ ತೀರ್ಪು ಸಾಕ್ಷಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಶ್ರೀಹರನ್ ಮತ್ತು ಇತರ ಐವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಜೈಲಿನಲ್ಲಿ ಅವರ ಉತ್ತಮ ನಡತೆ ಹಿನ್ನೆಲೆಯಲ್ಲಿ ಅವರನ್ನು ಸುಪ್ರೀಂ ಬಿಡುಗಡೆಗೊಳಿಸಿದೆ.

ಇತ್ತೀಚಿನ ಸುದ್ದಿ