7:16 PM Wednesday 10 - December 2025

ದಕ್ಷಿಣ ಕನ್ನಡ ಜನತೆಗೆ ಸಿಹಿ ಸುದ್ದಿ:  ರಾತ್ರಿ 9 ಗಂಟೆ ನಂತರದ ನಿರ್ಬಂಧ ತೆರವು

mangalore
07/08/2022

ಮೂರು ಕೊಲೆ ಕೃತ್ಯ ನಡೆದ ಹಿನ್ನೆಲೆಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿತ್ತು.  ಕೊಲೆ ಕೃತ್ಯ ಹಿನ್ನೆಲೆಯಲ್ಲಿ ವಿಧಿಸಿದ್ದ ರಾತ್ರಿ ನಿರ್ಬಂಧ ತೆರವುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ರಾತ್ರಿ 9 ಗಂಟೆಯ ಬಳಿಕ ಇದ್ದ ವ್ಯಾಪಾರ ನಿರ್ಬಂಧ ತೆರವುಗೊಳಿಸಲಾಗಿದೆ. ಅಂಗಡಿ, ವೈನ್ ಶಾಪ್, ಬಾರ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ಕಲ್ಪಿಸಲಾಗಿದೆ. ಜನರ ಓಡಾಟಕ್ಕೂ ಯಾವುದೇ ನಿರ್ಬಂಧ ಇಲ್ಲ. ಆದ್ರೆ ಆಗಸ್ಟ್ 14 ತನಕ 144 ಸೆಕ್ಷನ್ ಮುಂದುವರಿಕೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ

ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಆದ್ರೆ ರಾತ್ರಿ ಜನರು ಹೆಚ್ಚು ಓಡಾಟ ನಡೆಯದಂತೆ ಡಿಸಿ ಮನವಿ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version