ಬ್ರೇಕಿಂಗ್ ನ್ಯೂಸ್:  ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ - Mahanayaka
11:25 PM Wednesday 15 - October 2025

ಬ್ರೇಕಿಂಗ್ ನ್ಯೂಸ್:  ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ

13/11/2020

ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರ ರವಿಬೆಳಗೆರೆ ಅವರಿಗೆ ನಿನ್ನೆ ತಡರಾತ್ರಿ ಹೃದಯಾಘಾತವಾಗಿದ್ದು,  ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅವರು ನಿಧನರಾಗಿದ್ದಾರೆ.


Provided by

ರಾತ್ರಿ 12 ಗಂಟೆಗೆ ಅವರು ಬೆಂಗಳೂರಿನ ಹಾಯ್ ಬೆಂಗಳೂರು ಆಫೀಸ್ ನಲ್ಲಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಮಾರ್ಚ್ 15, 1958ರಲ್ಲಿ ಜನಿಸಿದ್ದ ರವಿ ಬೆಳಗೆರೆ ಅವರು, ಪತ್ರಿಕಾರಂಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರು. ಅಪರಾಧ ಜಗತ್ತಿನ ಜೊತೆಗೆ ಹಲವು ಪುಸ್ತಕಗಳನ್ನೂ ಬರೆದಿದ್ದಾರೆ. ಅಪರಾಧಿಗಳ ಜೊತೆಗೆ ನೇರ ನಂಟನ್ನೂ ಅವರು ಹೊಂದಿದ್ದರು.

ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ರವಿ ಬೆಳಗೆರೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶವಿದೆ.

ಇತ್ತೀಚಿನ ಸುದ್ದಿ