ವಾಯುಸೇನೆಯ ಲಘು ವಿಮಾನ ಪತನಕ್ಕೆ ಕಾರಣ ಬಯಲು - Mahanayaka
10:11 PM Wednesday 18 - March 2026

ವಾಯುಸೇನೆಯ ಲಘು ವಿಮಾನ ಪತನಕ್ಕೆ ಕಾರಣ ಬಯಲು

plane crash
01/06/2023

ಚಾಮರಾಜನಗರ: ವಾಯುಸೇನೆಯ ಕಿರಣ್ ಏರ್ ಪಥ್ U692 ವಿಮಾನ ಪ್ರತಿಕೂಲ ವಾತಾವರಣದಿಂದಾಗಿ ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮದಲ್ಲಿ ಪತನಗೊಂಡಿದೆ.

ಇದೊಂದು ತರಬೇತಿ ವಿಮಾನವಾಗಿದ್ದು, ಭೂಮಿಕಾ ಹಾಗೂ ತೇಜ್ ಪಾಲ್ ಎಂಬವರು ಈ ವಿಮಾನವನ್ನು ಚಲಾಯಿಸುತ್ತಿದ್ದರು. ಪ್ಯಾರಚೂಟ್ ಮೂಲಕ ಇಬ್ಬರೂ ತಮ್ಮನ್ನು ಬಚಾವ್ ಮಾಡಿಕೊಂಡಿದ್ದು ವಿಮಾನ ಪತನಗೊಂಡ 2 ಕಿ.ಮೀ. ದೂರದಲ್ಲಿ ಇಬ್ಬರು ಬಿದ್ದಿದ್ದರು. ಸದ್ಯ, ಇಬ್ಬರನ್ನು  ವಾಯುಸೇನೆಯವರು ಪತ್ತೆಹಚ್ಚಿ ರಕ್ಷಣೆ ಮಾಡಿದ್ದಾರೆ.

ಗಾಯಾಳುಗಳನ್ನು  ಬೆಂಗಳೂರಿಗೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಕರೆದೊಯ್ದಿದ್ದಾರೆ. ಇಬ್ಬರಿಗೂ ಕುತ್ತಿಗೆ ಬಳಿ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ