10:16 AM Saturday 23 - August 2025

ರೇಣುಕಾಸ್ವಾಮಿ ಕೊಲೆ  ಪ್ರಕರಣ: ನಾಲ್ವರು ಆರೋಪಿಗಳು ತುಮಕೂರು ಕಾರಾಗೃಹಕ್ಕೆ ಶಿಫ್ಟ್

tumakuru jail
26/06/2024

ತುಮಕೂರು‌: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಾಲ್ವರು ಆರೋಪಿಗಳನ್ನ ತುಮಕೂರಿನ ಕಾರಾಗೃಹಕ್ಕೆ  ಸ್ಥಳಾಂತರಿಸಲಾಗಿದೆ.

24ನೇ ಎಸಿಎಂಎಂ ಕೋರ್ಟ್ ಆದೇಶ ಹಿನ್ನೆಲೆ‌  ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ನನ್ನು ತುಮಕೂರು ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.

ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ  ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನ ಸ್ಥಳಾಂತರ ಮಾಡಲಾಯಿತು.

ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್  ಮಾಡಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನ ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version