4:51 AM Friday 11 - September 2026

12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ

indian king cobra
27/11/2023

ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ‌ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು.

ಈ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version