ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವುದು ಕೇವಲ ಮುಸ್ಲಿಮರಿಗೆ ಮಾತ್ರವಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಗುತ್ತಿಗೆಯಲ್ಲಿ ಮೀಸಲಾತಿ ಮುಸ್ಲಿಮರಿಗೆ ಮಾತ್ರವಲ್ಲ, ಅಲ್ಪಸಂಖ್ಯಾತ ಮತ್ತು ಹಿಂದುಳಿದವರಿಗೂ ಮೀಸಲಾತಿ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯದವರಿಗೆ ಮಾತ್ರ ಶೇ.4ರಷ್ಟು ಮೀಸಲಾತಿ ನೀಡಲಾಗುತ್ತಿದೆ ಎಂದು ಹೇಳಿದವರು ಯಾರು? ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೂ ಮೀಸಲಾತಿ ನೀಡಲಾಗುತ್ತಿದೆ ಎಂದರು.
ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಂ ಸಮುದಾಯದವರಲ್ಲ. ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ ಹೀಗೆ ಹಲವು ಧರ್ಮಗಳೂ ಬರುತ್ತವೆ. ಈ ಹಿಂದೆ ಪರಿಶಿಷ್ಟ ಜಾತಿ/ಪಂಗಡದ ವರಿಗೆ ಗುತ್ತಿಗೆ ಮೀಸಲಾತಿ ನೀಡಲು ತಿದ್ದುಪಡಿ ಮಾಡಲಾಗಿತ್ತು. ಈಗ ಅದಕ್ಕೆ ಅಲ್ಪಸಂಖ್ಯಾತರು, ಹಿಂದುಳಿದವರನ್ನು ಸೇರಿಸಲಾಗುತ್ತಿದೆ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: