ಎರಡು ಕಾರುಗಳ ನಡುವೆ ರಸ್ತೆ ಅಪಘಾತ: ಐವರಿಗೆ ಗಾಯ - Mahanayaka

ಎರಡು ಕಾರುಗಳ ನಡುವೆ ರಸ್ತೆ ಅಪಘಾತ: ಐವರಿಗೆ ಗಾಯ

belthagady
09/07/2023

 ದಕ್ಷಿಣ ಕನ್ನಡ: ಎರಡು ಕಾರುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಇಂದು ನಡೆದಿದೆ.

ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಕಾರನ್ನು ಸುಮಾರು ದೂರು ದೂಡಿಕೊಂಡು ಹೋಗಿದ್ದಲ್ಲದೆ ಕಾರು ಉರುಳಿಬಿದ್ದಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ. ಓಮ್ನಿ ಕಾರು ಚಾಲಕ ರಾಯ್ಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸೇರಿದಂತೆ ಮೂವರು ಮತ್ತು ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯಗಳಾಗಿವೆ. ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಓಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ