9:26 AM Wednesday 10 - December 2025

ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್ ನನ್ನು ಕೊಂದ್ರೆ ಕೋಟಿ ಕೋಟಿ ಬಹುಮಾನ: ಕ್ಷತ್ರಿಯ ಕರ್ಣಿ ಸೇನಾ ಘೋಷಣೆ

22/10/2024

ಜೈಲಿನಲ್ಲಿರುವ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್ ನನ್ನು ಕೊಂದ್ರೆ ಕ್ಷತ್ರಿಯ ಕರ್ಣಿ ಸೇನಾ ಬಹುಮಾನ ನೀಡುವುದಾಗಿ ಘೋಷಿಸಿದೆ ಎಂದು ಝೀ ನ್ಯೂಸ್ ಟಿವಿ ವರದಿ ಮಾಡಿದೆ.

ಬಿಷ್ಣೋಯ್ ಅವರನ್ನು ಹತ್ಯೆ ಮಾಡುವ ಯಾವುದೇ ಪೊಲೀಸ್ ಅಧಿಕಾರಿಗೆ 1.11 ಕೋಟಿ ಬಹುಮಾನ ನೀಡುವುದಾಗಿ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ರಾಜ್ ಶೇಖಾವತ್ ಸಾರ್ವಜನಿಕವಾಗಿ ಘೋಷಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಇತ್ತೀಚೆಗೆ ಮುಂಬೈನಲ್ಲಿ ಎನ್ ಸಿಪಿ ನಾಯಕ ಬಾಬಾ ಸಿದ್ದೀಕಿ ಇವರನ್ನು ಹತ್ಯೆ ಮಾಡಿತ್ತು.

ಬಿಷ್ಣೋಯ್ ಅವರನ್ನು ಸಬರಮತಿ ಜೈಲಿನಲ್ಲಿ ಬಂಧಿಸಿಟ್ಟಾಗ ಸೃಷ್ಟಿಸಿದ ಬೆದರಿಕೆಯ ಬಗ್ಗೆ ರಾಜ್ ಶೇಖಾವತ್ ಕೇಂದ್ರ ಮತ್ತು ಗುಜರಾತ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಷ್ಣೋಯ್ ಜೈಲಿನಲ್ಲಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಏಪ್ರಿಲ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅವರು ಭಾಗಿಯಾಗಿದ್ದರು. ಆದರೆ ಮುಂಬೈ ಪೊಲೀಸರಿಗೆ ಅವರ ಕಸ್ಟಡಿಯನ್ನು ಪಡೆಯಲು ಸಾಧ್ಯವಾಗಲಿಲ್ಲ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version