ಡಿಜೆ- ಕೆಜಿ ಹಳ್ಳಿ ಗಲಭೆ: ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಮುಖ ಆರೋಪಿ ಬಂಧನ
ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಕೊರೋನಾ ಪಾಸಿಟಿವ್ ಎಂದು ಹೇಳಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಕ್ಟೋಬರ್ 23ರಂದು ಆಸ್ಪತ್ರೆಯಿಂದ ಪರಾರಿಯಾಗಿದ್ದರ . ತೀವ್ರ ಹುಡುಕಾಟದ ನಂತರ ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಸಂಪತ್ ರಾಜ್, ನಾಗರಹೊಳೆ, ಕೇರಳ ಮುಂತಾದೆಡೆಗೆ ಪ್ರಯಾಣಿಸುತ್ತಿದ್ದರು. ಆದರೆ ಸೋಮವಾರವಷ್ಟೇ ಬೆಂಗಳೂರಿಗೆ ಬಂದು ಬೆನ್ಸನ್ ಟೌನ್ನಲ್ಲಿನ ಅಪಾರ್ಟ್ಮೆಂಟೊಂದರಲ್ಲಿ ತಂಗಿದ್ದ ಸಂಪತ್ ರಾಜ್ ಕುರಿತು ಖಚಿತ ಮಾಹಿತಿ ಸಿಗುತ್ತಿದ್ದಂತೆ, ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.