ಜನಸಂಖ್ಯೆ ಆಧಾರದ ಮೇಲೆ ಸಮುದಾಯದ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ – ಸಚಿವ ಡಾ.ಸುಧಾಕರ್ - Mahanayaka

ಜನಸಂಖ್ಯೆ ಆಧಾರದ ಮೇಲೆ ಸಮುದಾಯದ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ – ಸಚಿವ ಡಾ.ಸುಧಾಕರ್

07/12/2020

ಹಾಸನ:  ಸಾರ್ವಜನಿಕ ಆರೋಗ್ಯ ಗುಣಮಟ್ಟಗಳ ಪ್ರಕಾರ ಸಮತಟ್ಟು ಪ್ರದೇಶಗಳಲ್ಲಿ 1 ಲಕ್ಷ 20 ಸಾವಿರ ಜನಸಂಖ್ಯೆಗೆ ಒಂದರಂತೆ ಒಂದು ಸಮುದಾಯ ಆರೋಗ್ಯ ಕೇಂದ್ರವನ್ನು ಮತ್ತು ಗುಡ್ಡಗಾಡು ಪ್ರದೇಶ ಮರುಭೂಮಿ ಮತ್ತು ಆದಿವಾಸಿ ಪ್ರದೇಶದಲ್ಲಿ 8 ಲಕ್ಷ ಜನಸಂಖ್ಯೆಗೆ ಪ್ರತಿ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದನ್ನು ಸಮುದಾಯದ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಟ್ಟು 33 ಸಿಬ್ಬಂದಿ ಒದಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈಧ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.


Provided by

ವಿಧಾನ ಪರಿಷತ್‍ ನಲ್ಲಿ ಸದಸ್ಯರಾದ ಎಂ.ಎ ಗೋಪಾಲಸ್ವಾಮಿ ಯವರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ನಿಗದಿಪಡಿಸಿರುವ ಮಾನದಂಡಗಳೇನು? ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಯಾವ ಯಾವ ಸೌಲಭ್ಯಗಳನ್ನು ಒದಗಿಸಲಾಗುವುದು. ಎಂಬ ಚುಕ್ಕಿ ಗುರುತಿನ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ.


ಎಂ.ಎ ಗೋಪಾಲಸ್ವಾಮಿ ಕೇಳಿದ ಮತ್ತೊಂದು ಪ್ರಶ್ನೆ, ಹಾಸನ ಜಿಲ್ಲೆಯಲ್ಲಿ ಎಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಅರ್ಹತೆ ಪಡೆದುಕೊಂಡಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಹೊರರೋಗಿ ಒಳರೋಗಿ ದಾಖಲಾತಿ ವಿವಿಧ ರೋಗ ತಪಾಸಣೆ ಪ್ರಸೂತಿ ಆರೈಕೆ, ದಂತ ಚಿಕಿತ್ಸಾ ಸಣ್ಣಪ್ರಮಾಣದ ಶಸ್ತ್ರಚಿಕಿತ್ಸೆ ಸೇವೆಗಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಆಂಬುಲೆನ್ಸ್ ಸೇವೆ ಹಾಗೂ ಇತರ ಅವಶ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. 2011ರ ಜನಗಣತಿಯ ಆಧಾರದ ಮೇಲೆ ಹಾಸನ ಜಿಲ್ಲೆಯ ಒಟ್ಟು ಗ್ರಾಮೀಣ ಜನಸಂಖ್ಯೆ 13,99658 ಇದು ಜನಸಂಖ್ಯೆಗನುಗುಣವಾಗಿ ಪ್ರಸ್ತುತ 12 ಸಮುದಾಯ ಆರೋಗ್ಯ ಕೇಂದ್ರ ಸ್ಥಾಪಿಸಲು ಅವಕಾಶವಿದ್ದು ಹಾಲಿ 15 ಸಮುದಾಯ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಹಾಸನ ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ಯಾವುದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗಿರುವುದಿಲ್ಲ ಎಂದು ಸಚಿವರು ಸುಧಾಕರ್ ಹೇಳಿದರು.

ಇದೇ ವೇಳೆ ಹಾಸನ ಜಿಲ್ಲೆಗೆ ಎಷ್ಟು ಪ್ರಮಾಣದ ಕೋವಿಡ್ ಲಸಿಕೆ ಅವಶ್ಯಕತೆ ಇದೆ ಹಾಗೂ ಎಷ್ಟು ಪ್ರಮಾಣದ ಲಸಿಕೆ ಸರಬರಾಜು ಮಾಡಲು ಉದ್ದೇಶಿಸಲಾಗಿದೆ ಎಂದು ಪರಿಷತ್ ಸದಸ್ಯರಾದ ಗೋಪಾಲಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು ಭಾರತ ಸರ್ಕಾರದ ಮಾರ್ಗಸೂಚಿಯಂತೆ ಪ್ರಥಮ ಆದ್ಯತೆಯಾಗಿ ಆರೋಗ್ಯ ಕಾರ್ಯಕರ್ತರನ್ನು ನೊಂದಾಯಿಸಲು ನಿರ್ದೇಶಿಸಲಾಗಿದೆ ಅದರಂತೆ ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿನ ಆರೋಗ್ಯ ಕಾರ್ಯಕರ್ತರ ಮಾಹಿತಿಯನ್ನು ಜಿಲ್ಲಾ ಮಟ್ಟದಲ್ಲಿಯೇ ಪಡೆಯಲಾಗಿದ್ದು ಅದನ್ನು ಕೋವಿನ್ ಪೋರ್ಟಲ್ ನಲ್ಲಿ ಇಂದಿಕರಿಸಲು ಸೂಚಿಸಲಾಗಿದೆ ಈ ಮಾಹಿತಿಯ ಕ್ರೋಡೀಕರಣ ಪ್ರಕ್ರಿಯೆ ಚಾಲ್ತಿಯಲ್ಲಿದೆ ಭಾರತ ಸರ್ಕಾರದಿಂzಲೇ ಲಸಿಕೆಗಳು ಸರಬರಾಜಾಗಲಿದೆ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ