ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ | ಸಚಿವ ಸವದಿ ಹೇಳಿಕೆ - Mahanayaka

ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ | ಸಚಿವ ಸವದಿ ಹೇಳಿಕೆ

14/12/2020

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದು, ಈ ಬಗ್ಗೆ ತನಗೆ ಮಾಹಿತಿ ಬಂದಿದೆ ಎಂದು ಹೇಳಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಹಿತಿ ಗೊತ್ತಾಗಿದೆ. ನಾನು ಯಾರ ಬಗ್ಗೆಯೂ ಟೀಕೆ-ಟಿಪ್ಪಣಿ ಮಾಡುವುದಿಲ್ಲ. ರಾಜ್ಯದ ಹಲವೆಡೆ ಸಂಚಾರ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾತ್ರ ಹೇಳಿಕೆ ನೀಡಿದ್ದಾರೆ. ಆದರೆ ಮುಷ್ಕರ ನಿರತ ನೌಕರರಿಂದ ಈ ಬಗ್ಗೆ ಯಾವುದೇ ಮಾಹಿತಿಗಳು ಇನ್ನೂ ಬಂದಿಲ್ಲ. ಇಲ್ಲಿಯವರೆಗೂ ಸರ್ಕಾರ ಸಾರಿಗೆ ನೌಕರರನ್ನು  ಸರ್ಕಾರಿ ನೌಕರರು ಎಂದು ಪರಿಗಣಿಸುವ ಬಗ್ಗೆ  ಯಾವುದೇ ಹೇಳಿಕೆಯನ್ನು ನೀಡಿಲ್ಲ. ಬೆರಳೆಣಿಕೆಯ ಬಸ್ ಗಳನ್ನು ರಸ್ತೆಗಳಿಸಿ, ಸಚಿವರು ಈ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ