11:05 PM Thursday 21 - August 2025

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ನಕಲಿ ಅರ್ಜಿಗಳ ಕಾಟ

chikamagalore
19/07/2023

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ನಕಲಿ ಅರ್ಜಿಗಳ ಮಾರಾಟದ ಕಾಟ ಆರಂಭವಾಗಿದೆ.

ಜಿಲ್ಲೆಯ ಹಲವೆಡೆಗಳಲ್ಲಿ ನಕಲಿ ನೋಂದಣಿ ಪತ್ರಗಳ ಮಾರಾಟ ಮಾಡಲಾಗ್ತಿದೆ. ಸುಮಾರು 100ರಿಂದ 200 ರೂಪಾಯಿಗಳಿಗೆ ಅರ್ಜಿಗಳನ್ನು ಮಾರಾಟ ಮಾಡಲಾಗ್ತಿ ಎನ್ನುವ ಆರೋಪ ಕೇಳಿ ಬಂದಿದೆ.

ನಕಲಿ ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಫೋಟೋ ಬಳಸಲಾಗಿದೆ. ಇದರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿರುವ ಯುವ ಕಾಂಗ್ರೆಸ್ ಶೃಂಗೇರಿ ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version