ಬಂಗಾಳಕ್ಕಿಂತ ಕಾಶ್ಮೀರದಲ್ಲಿ ಭದ್ರತೆ ಉತ್ತಮ ಇದೆ: ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಹೇಳಿಕೆ

23/12/2023

ಪಶ್ಚಿಮ ಬಂಗಾಳಕ್ಕೆ ಹೋಲಿಸಿದರೆ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪರಿಸ್ಥಿತಿ ಉತ್ತಮವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ. ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯ ಸೇನಾ ಜವಾನರು ಪ್ರಾಣ ಕಳೆದುಕೊಂಡ ಒಂದು ದಿನದ ನಂತರ ಸಿನ್ಹಾ ಅವರ ಹೇಳಿಕೆ ಬಂದಿದೆ.

ಕಾಶ್ಮೀರದ ಭದ್ರತಾ ಪರಿಸ್ಥಿತಿ ಬಂಗಾಳಕ್ಕಿಂತ ಉತ್ತಮವಾಗಿದೆ. ದಯವಿಟ್ಟು ರಾಜ್ಯಕ್ಕೆ ಭೇಟಿ ನೀಡಿ, ಮತ್ತು ನೀವು ವ್ಯತ್ಯಾಸವನ್ನು ನೋಡುತ್ತೀರಿ” ಎಂದು ಸಿನ್ಹಾ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು.

ಈ ಹೇಳಿಕೆಯ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, “ನನ್ನ ಹೇಳಿಕೆಗಳನ್ನು ರಾಜಕೀಯವಾಗಿ ತಿರುಚಬಾರದು. ಯಾಕೆಂದರೆ ಕಾಶ್ಮೀರದ ಭದ್ರತಾ ಪರಿಸ್ಥಿತಿ ಬಂಗಾಳದಷ್ಟೇ ಉತ್ತಮವಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ” ಎಂದಿದ್ದಾರೆ.

ಸೇನಾ ಬೆಂಗಾವಲು ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಿನ್ಹಾ ತಮ್ಮ ಖಂಡನೆಯನ್ನು ವ್ಯಕ್ತಪಡಿಸಿದರು. ಕಣಿವೆಯಲ್ಲಿ ಶಾಂತಿಯನ್ನು ಭಂಗಗೊಳಿಸುವ ಪ್ರಯತ್ನಗಳಿಗೆ “ನಮ್ಮ ನೆರೆಯವನು” ಕಾರಣ ಎಂದು ಅವರು ಹೇಳಿದರು. ಇದು ಪಾಕಿಸ್ತಾನವನ್ನು ಪರೋಕ್ಷವಾಗಿ ಉಲ್ಲೇಖಿಸುತ್ತದೆ.

ಇತ್ತೀಚಿನ ಸುದ್ದಿ

Exit mobile version