ಮೈಕ್ರೋ ಫೈನಾನ್ಸ್ ವಿರುದ್ಧ ಕಾನೂನು ತರುವ ನಿರ್ಧಾರಕ್ಕೆ ಹಿನ್ನಡೆ: ರಾಜ್ಯಪಾಲರಿಂದ ಸುಗ್ರೀವಾಜ್ಞೆ ತಿರಸ್ಕಾರ - Mahanayaka
4:42 AM Wednesday 17 - September 2025

ಮೈಕ್ರೋ ಫೈನಾನ್ಸ್ ವಿರುದ್ಧ ಕಾನೂನು ತರುವ ನಿರ್ಧಾರಕ್ಕೆ ಹಿನ್ನಡೆ: ರಾಜ್ಯಪಾಲರಿಂದ ಸುಗ್ರೀವಾಜ್ಞೆ ತಿರಸ್ಕಾರ

thwar chandra gehlot
07/02/2025

ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲು ನಿರ್ಧರಿಸಿತ್ತು. ಆದ್ರೆ ಇದೀಗ ಮೈಕ್ರೋ ಫೈನಾನ್ಸ್ ವಿರುದ್ಧದ ಸರ್ಕಾರದ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ.


Provided by

ಮೈಕ್ರೋ ಫೈನಾನ್ಸ್ ಗಳನ್ನು ನಿಯಂತ್ರಣಕ್ಕೆ ತರಲು ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಲು ಮುಂದಾಗಿತ್ತು. ಆದ್ರೆ ಈ ಸುಗ್ರಿವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.

ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ – 2025 ಕರಡು ಪ್ರತಿ ರಾಜ್ಯಪಾಲರಿಗೆ ರವಾನೆ ಮಾಡಲಾಗಿತ್ತು. ರಾಜಭವನಕ್ಕೆ ಸಿಎಂ ಕಚೇರಿ ಕಡತ ಸಲ್ಲಿಸಿತ್ತು. ಸಿಎಂ ಅನುಮೋದನೆಯ ಬಳಿಕ ರಾಜ್ಯಪಾಲರಿಗೆ ರವಾನೆ ಮಾಡಲಾಗಿತ್ತು. ಆದ್ರೆ ರಾಜ್ಯಪಾಲರು ಈ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ್ದಾರೆ.

ಸುಗ್ರೀವಾಜ್ಞೆ ತಿರಸ್ಕಾರಕ್ಕೆ ಕಾರಣ ಏನು?

ಸುಗ್ರೀವಾಜ್ಞೆ ತಿರಸ್ಕಾರಕ್ಕೆ ರಾಜ್ಯಪಾಲರು ಕೆಲವು ಕಾರಣಗಳನ್ನು ನೀಡಿದ್ದಾರೆ. 10 ವರ್ಷಗಳ ಸಜೆ ಮತ್ತು 5 ಲಕ್ಷ ದಂಡ ವಿಪರೀತವಾಗಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸ್ ಇಲಾಖೆಯು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಬಳಸಬಹುದಿತ್ತು. ಈ ಸುಗ್ರೀವಾಜ್ಞೆ ಕಿರುಬಂಡವಾಳದ ಮೇಲೆ ನಕಾರಾತ್ಮ ಪರಿಣಾಮ ಬೀರುವ ಸಾಧ್ಯತೆಗಳಿವೆ ಮತ್ತು ಬಡವರ ಮೇಲೆ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


 

ಇತ್ತೀಚಿನ ಸುದ್ದಿ