ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಲಿ: ಸಚಿವ ವೆಂಕಟೇಶ್ - Mahanayaka

ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಲಿ: ಸಚಿವ ವೆಂಕಟೇಶ್

venkatesh
30/11/2023

ಚಾಮರಾಜನಗರ: ಭ್ರೂಣ ಹತ್ಯೆಯಂತ ದ್ರೋಹದ ಕೆಲಸ ಮತ್ತೊಂದಿಲ್ಲ ಎಂದು ಜಿಲ್ಕಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು. ಚಾಮರಾಜನಗರದಲ್ಲಿ ಅವರು ಮಾಧ್ಯಮವರೊಟ್ಟಿಗೆ ಮಾತನಾಡಿ, ಭ್ರೂಣ ಹತ್ಯೆ ಮಾಡಿದವರ ಜೊತೆಗೆ ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಬೇಕು, ಆಗ ಮಾತ್ರ ಈ ರೀತಿ ಪಾಪದ ಕೃತ್ಯ ನಿಲ್ಲಲ್ಲಿದೆ, ಈ ಘಟನೆ ಬೆಳಕಿಗೆ ಬಂದ ನಂತರ ಸರ್ಕಾರ ಹಲವು ಕ್ರಮ ತೆಗೆದುಕೊಂಡಿದೆ ಎಂದರು.


Provided by

ಇನ್ನು, ಚೀನಾದಲ್ಲಿ ನ್ಯುಮೋನಿಯಾ ಸೋಂಕು ಹೆಚ್ಚಳವಾದ ಸಂಬಂಧ ರಾಜ್ಯವು ಕೂಡ ಎಚ್ಚೆತ್ತುಕೊಂಡಿದೆ. ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ, ವಿಶೇಷ ವಾರ್ಡ್ ಗಳನ್ನು ರೂಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜಾತಿ ಗಣತಿ ವರದಿ ಬಿಡುಗಡೆಯಾದ ಬಳಿಕ ಸರ್ಕಾರ ಪತನ ಆಗುತ್ತದೆ ಹಾಗೂ ಲೋಕಸಭಾ ಚುನಾವಣೆಗೂ ಮುನ್ನ ಡಿಕೆಶಿ ಜೈಲಿಗೆ ಹೋಗುತ್ತಾರೆ ಎಂಬ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಟೀಕೆಗೆ ಉತ್ತರಿಸಿ, ಈಶ್ವರಪ್ಪ ಮನಸ್ಸಿಗೆ ಬಂದಂತೆ ಏನೇನೋ ಮಾತನಾಡುತ್ತಾರೆ, ಅವರ ಹೇಳಿಕೆ ನಮ್ಮ ಅಧ್ಯಕ್ಷರನ್ನ ಉದ್ದೇಶಪೂರ್ವಕವಾಗಿ ಜೈಲಿಗೆ ಹಾಕಿಸುವ ಹುನ್ನಾರದಂತಿದೆ, ಈಶ್ವರಪ್ಪನವರ ಹೇಳಿಕೆ ಹಿಂದೆ ಷಡ್ಯಂತ್ರ ಅಡಗಿದೆ, ಯಾರು ಏನೆ ಅಂದರೂ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದರು.

ಇನ್ನು, ಸುರ್ಜೇವಾಲ ರಾಜ್ಯಕ್ಕೆ ವಸೂಲಿಗೆ ಬರುತ್ತಾರೆ ಎಂಬ ಬಿಜೆಪಿಯವರ ಆರೋಪಕ್ಕೆ ಮಾತನಾಡಿ, ಸುರ್ಜೇವಾಲ ರಾಜ್ಯದ ಉಸ್ತುವಾರಿ ಆಗಿದ್ದಾರೆ, ಅವರು ಫ್ಲೈಟಲ್ಲಿ ದುಡ್ಡು ಹಿಡಿದುಕೊಂಡು ಹೋಗಲು ಆಗುತ್ತಾ?, ಬಿಜೆಪಿಯವರ ಆಪಾದನೆಗಳಿಗೆ ಅರ್ಥವಿಲ್ಲ ಎಂದು ಕಿಡಿಕಾರಿದರು.

ಇತ್ತೀಚಿನ ಸುದ್ದಿ