ಮಗನ ಪ್ರೇಮ ವಿವಾಹವನ್ನು ವಿರೋಧಿಸಿ ತಾಯಿಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿ, ಮೆರವಣಿಗೆ
ಪ್ರತಾಪಗಢ: ಮಗನ ಪ್ರೇಮ ವಿವಾಹವನ್ನು ವಿರೋಧಿಸಿ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಥಳಿಸಿ, ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ನಡೆದಿದೆ.
ಪ್ರತಾಪಗಢ ಜಿಲ್ಲೆಯ ಛೋಟಿ ಸದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ಪುತ್ರ ನೆಲವ್ ಒಂದು ವರ್ಷದ ಹಿಂದೆ ಯುವತಿಯೊಬ್ಬಳನ್ನು ಆಕೆಯ ಕುಟುಂಬಸ್ಥರ ವಿರೋಧದ ನಡುವೆಯೇ ವಿವಾಹವಾಗಿದ್ದನು.
ಈ ಘಟನೆಯಿಂದ ವಧುವಿನ ಮನೆಯವರು ಯುವಕನ ಮನೆಯವರ ವಿರುದ್ಧ ಸೇಡುಕಾರುತ್ತಿದ್ದರು. ವಿವಾಹದ ಸಂದರ್ಭದಲ್ಲಿ ಕೂಡ ಸಾಕಷ್ಟು ತೊಂದರೆ ನೀಡಲು ವಧುವಿನ ಕಡೆಯವರು ಮುಂದಾಗಿದ್ದರು. ಆದರೆ ಯುವಕನ ಕಡೆಯವರು ವಿವಾಹಕ್ಕೆ ಬೆಂಬಲಿಸಿ, ವಿವಾಹ ನಡೆಸಿದ್ದರು.
ಹೀಗಾಗಿ ಸೇಡು ತೀರಿಸಿಕೊಳ್ಳಲು ಯುವತಿಯ ಮನೆಯವರು ಕಾಯುತ್ತಿದ್ದರು. ಅಂತೆಯೇ ಯುವಕನ ತಾಯಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಡೆದುಕೊಂಡು ಬರುತ್ತಿದ್ದ ವೇಳೆ, ಯುವತಿಯ ಕಡೆಯವರು 4—5 ಜನರು ಅಡ್ಡಗಟ್ಟಿ ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ್ದಾರೆ.
ಘಟನೆಯ ಬಳಿಕ ಸಂತ್ರಸ್ತೆ ತಡರಾತ್ರಿ ಘಟನೆ ಸಂಬಂಧ ಪೊಲೀಸರಿಗೆ ದೂರು ನೀಡಿದರು. ಕೃತ್ಯದ ಬಳಿಕ ಯುವತಿಯ ಮನೆಯವರು ತಲೆಮರೆಸಿಕೊಂಡಿದ್ದಾರೆ. ಸದ್ಯ ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ನೀಡಿದ ಬಳಿಕ, ಪೊಲೀಸರು ಆರೋಪಿಗಳ ಶೋಧಕ್ಕೆ ಮುಂದಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: