ಶಾಸಕಿಯ ಪತಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಿಜೆಪಿ - Mahanayaka
2:02 PM Saturday 12 - September 2026

ಶಾಸಕಿಯ ಪತಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಿಜೆಪಿ

24/10/2020

ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.

shreenivas
ಡಿ.ಟಿ.ಶ್ರೀನಿವಾಸ್

ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಶ್ರೀನಿವಾಸ್ ಅವರಿಗೆ ಟಿಕೆಟ್ ಕೈತಪ್ಪಿತ್ತು. ಬಿಜೆಪಿಯಿಂದ ಶಿರಾದ ಚಿದಾನಂದ ಗೌಡ ಅವರಿಗೆ ಟಿಕೆಟ್ ನೀಡಲಾಗಿತ್ತು. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

mahanayaka

 ನಾಮಪತ್ರ ವಾಪಸ್ ಪಡೆಯುವಂತೆ ಶ್ರೀನಿವಾಸ್ ಗೆ, ಡಿಸಿಎಂ ಅಶ್ವಥ್ ನಾರಾಯಣ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಮಾತುಕತೆ ನಡೆಸಿದ್ದರು. ಪಕ್ಷದ ಮುಖಂಡರ ಮಾತಿಗೆ ಅವರು ಮಣಿಯಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ಮಹಾನಾಯಕ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ

https://t.me/joinchat/Q8oMxBZkakVUy7-VpEsIXQ

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler