ಶೋಭಾ ಕರಂದ್ಲಾಜೆ ಸೇರಿದಂತೆ ಮೂವರಿಗೆ ಸಚಿವ ಸ್ಥಾನ ನೀಡಲು ಶ್ರೀನಿವಾಸ್ ಪ್ರಸಾದ್ ಒತ್ತಾಯ! - Mahanayaka
11:45 PM Wednesday 15 - October 2025

ಶೋಭಾ ಕರಂದ್ಲಾಜೆ ಸೇರಿದಂತೆ ಮೂವರಿಗೆ ಸಚಿವ ಸ್ಥಾನ ನೀಡಲು ಶ್ರೀನಿವಾಸ್ ಪ್ರಸಾದ್ ಒತ್ತಾಯ!

shobha karandlaje
04/07/2021

ಮೈಸೂರು: ಆರೋಗ್ಯ ಕಾರಣಗಳಿಂದಾಗಿ ನಾನು ಸಚಿವನಾಗುವುದಿಲ್ಲ. ಉಮೇಶ್ ಜಾಧವ್ ಗೆ ಕೇಂದ್ರ ಮಂತ್ರಿ ಸ್ಥಾನ ನೀಡಬೇಕು. ಅಲ್ಲದೇ ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ ಅವರಿಗೂ ಸಚಿವ ಸ್ಥಾನ ನೀಡಬೇಕು ಎಂದು  ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.


Provided by

ಅಧಿವೇಶನಕ್ಕೂ ಮೊದಲು ಸಚಿವ ಸಂಪುಟ ವಿಸ್ತರಣೆಯಾದರೆ ಉತ್ತಮ ಎಂದು ಅಭಿಪ್ರಾಯಪಟ್ಟಿರುವ ಶ್ರೀನಿವಾಸ್ ಪ್ರಸಾದ್, ಕೇಂದ್ರ ಸಚಿವ ಸಂಪುಟದಲ್ಲಿ ಉಮೇಶ್ ಜಾಧವ್, ಶಿವಕುಮಾರ್ ಹಾಗೂ ಶೋಭಾ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೂ ಯೋಗೇಶ್ವರ್ ಜೊತೆಗಿನ ಭೇಟಿ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು,  ಹಿರಿಯ ರಾಜಕಾರಣಿ ಎನ್ನುವ  ಕಾರಣಕ್ಕೆ ಬಹಳಷ್ಟು ಮಂದಿ ಬರುತ್ತಾರೆ.  ಅವರು ಮೈಸೂರಿಗೆ ಬಂದಾಗಲೆಲ್ಲ ಭೇಟಿಯಾಗುತ್ತಾರೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲವು ಸರಿಯಾಗಿದೆ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಇನ್ನೂ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಅವರು,  ಎಸ್ ಐಟಿ ಮುಂದೆ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖಾ ವರದಿಯ ಬಳಿಕ ಅವರಿಗೆ ಮಂತ್ರಿ ಸ್ಥಾನ ಸಿಗಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಇತ್ತೀಚಿನ ಸುದ್ದಿ