ಹೊಸ ವರ್ಷ ಆಚರಣೆ ಹಿನ್ನೆಲೆ: ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಜನ‌ಸಾಗರ - Mahanayaka

ಹೊಸ ವರ್ಷ ಆಚರಣೆ ಹಿನ್ನೆಲೆ: ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಜನ‌ಸಾಗರ

shruneri
01/01/2023

ಚಿಕ್ಕಮಗಳೂರು:  ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ  ಶೃಂಗೇರಿ ಶಾರದಾಂಬೆ  ದೇವಸ್ಥಾನಕ್ಕೆ  ಜನ‌ಸಾಗರವೇ ಹರಿದು ಬಂದಿದ್ದು,  ಹೊಸ ವರ್ಷ ಆಚರಿಸಿ ಧಾರ್ಮಿಕ ಕ್ಷೇತ್ರಕ್ಕೆ ಪ್ರವಾಸಿಗರು ಭೇಟಿ ನೀಡಿದ್ದಾರೆ.

ಕಳೆದ ಮೂರು ದಿನಗಳಿಂದ ಕಾಫಿನಾಡಲ್ಲೇ ಪ್ರವಾಸಿಗರು ಬೀಡು ಬಿಟ್ಟಿದ್ದರು.  ನಿನ್ನೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಹೋಂಸ್ಟೇ, ರೆಸಾರ್ಟ್ ನಲ್ಲಿ ಹೊಸ ವರ್ಷ ಆಚರಣೆ ಮಾಡಿಕೊಳ್ಳುತ್ತಿದ್ದಾರೆ.

ಇಂದು ಧಾರ್ಮಿಕ ಕ್ಷೇತ್ರ ಶೃಂಗೇರಿ, ಹೊರನಾಡು, ಕಳಸಕ್ಕೆ ಭೇಟಿ ನೀಡುತ್ತಿರುವ  ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ಜಮಾವಣೆಯಾಗಿದ್ದಾರೆ. ನಿನ್ನೆಯಿಂದ ಸುಮಾರು  800ಕ್ಕೂ ಅಧಿಕ ಹೋಂ ಸ್ಟೇ, 40ಕ್ಕೂ ಅಧಿಕ ರೆಸಾರ್ಟ್ ಫುಲ್ ಆಗಿದ್ದವು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ