ಸಿದ್ದರಾಮಯ್ಯ ಸೋಲಿಗೆ ಒಳಒಪ್ಪಂದ ಆಗಿದ್ದು ನಿಜ | ರಹಸ್ಯ ಬಹಿರಂಗ ಮಾಡಿದ ಜೆಡಿಎಸ್  ಶಾಸಕ - Mahanayaka

ಸಿದ್ದರಾಮಯ್ಯ ಸೋಲಿಗೆ ಒಳಒಪ್ಪಂದ ಆಗಿದ್ದು ನಿಜ | ರಹಸ್ಯ ಬಹಿರಂಗ ಮಾಡಿದ ಜೆಡಿಎಸ್  ಶಾಸಕ

19/12/2020

ಗುಬ್ಬಿ: ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಸೋಲಿಸಲು ಬೆಂಬಲ ನೀಡಿದ್ದು ನಿಜ. ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು ಎನ್ನುವುದು ಕೂಡ ನಿಜ ಎಂದು ಜೆಡಿಎಸ್ ನ ಗುಬ್ಬಿ ಶಾಸಕ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಸಿದ್ದರಾಮಯ್ಯನವರು ತಮ್ಮ ಸೋಲಿಗೆ ಒಳಸಂಚು ನಡೆದಿತ್ತು ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ  ವ್ಯಾಪಕವಾಗಿ ಇದು ಚರ್ಚೆಯಾಗಿದ್ದು,  ಈ ಹೇಳಿಕೆಯ ಬೆನ್ನಲ್ಲೇ  ಗುಬ್ಬಿ ಶಾಸಕ ಶ್ರೀನಿವಾಸ್ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ.  ಸಿದ್ದರಾಮಯ್ಯ ಸೋಲಿಗೆ ಬೆಂಬಲ ನೀಡಿದ್ದು ನಿಜ ಎಂದು ಶ್ರೀನಿವಾಸ್ ಹೇಳಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರ ಮಾತ್ರವಲ್ಲದೇ, ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು. ಈ ಒಪ್ಪಂದ ಎಲ್ಲರಿಗೂ ಗೊತ್ತಿರುವಂತಹದ್ದೇ ಆಗಿದೆ. ಸಿದ್ದರಾಮಯ್ಯನವರಿಗೆ ಈಗ ಜ್ಞಾನೋದಯವಾಯಿತೇ? ಎಂದು ಅವರು ಇದೇ ಸಂದರ್ಭ ಪ್ರಶ್ನಿಸಿದರು.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ