9:22 AM Saturday 12 - September 2026

ಸಿದ್ದರಾಮಯ್ಯ ಸೋಲಿಗೆ ಒಳಒಪ್ಪಂದ ಆಗಿದ್ದು ನಿಜ | ರಹಸ್ಯ ಬಹಿರಂಗ ಮಾಡಿದ ಜೆಡಿಎಸ್  ಶಾಸಕ

19/12/2020

ಗುಬ್ಬಿ: ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಸೋಲಿಸಲು ಬೆಂಬಲ ನೀಡಿದ್ದು ನಿಜ. ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು ಎನ್ನುವುದು ಕೂಡ ನಿಜ ಎಂದು ಜೆಡಿಎಸ್ ನ ಗುಬ್ಬಿ ಶಾಸಕ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಸಿದ್ದರಾಮಯ್ಯನವರು ತಮ್ಮ ಸೋಲಿಗೆ ಒಳಸಂಚು ನಡೆದಿತ್ತು ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ  ವ್ಯಾಪಕವಾಗಿ ಇದು ಚರ್ಚೆಯಾಗಿದ್ದು,  ಈ ಹೇಳಿಕೆಯ ಬೆನ್ನಲ್ಲೇ  ಗುಬ್ಬಿ ಶಾಸಕ ಶ್ರೀನಿವಾಸ್ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ.  ಸಿದ್ದರಾಮಯ್ಯ ಸೋಲಿಗೆ ಬೆಂಬಲ ನೀಡಿದ್ದು ನಿಜ ಎಂದು ಶ್ರೀನಿವಾಸ್ ಹೇಳಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರ ಮಾತ್ರವಲ್ಲದೇ, ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು. ಈ ಒಪ್ಪಂದ ಎಲ್ಲರಿಗೂ ಗೊತ್ತಿರುವಂತಹದ್ದೇ ಆಗಿದೆ. ಸಿದ್ದರಾಮಯ್ಯನವರಿಗೆ ಈಗ ಜ್ಞಾನೋದಯವಾಯಿತೇ? ಎಂದು ಅವರು ಇದೇ ಸಂದರ್ಭ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version