ಗುರುದ್ವಾರದಲ್ಲಿ ಸ್ಫೋಟ: ಇಬ್ಬರು ಸಾವು, ಹಲವರನ್ನು ಒತ್ತೆಯಾಳಾಗಿಸಿದ ಉಗ್ರರು - Mahanayaka
12:24 PM Wednesday 7 - January 2026

ಗುರುದ್ವಾರದಲ್ಲಿ ಸ್ಫೋಟ: ಇಬ್ಬರು ಸಾವು, ಹಲವರನ್ನು ಒತ್ತೆಯಾಳಾಗಿಸಿದ ಉಗ್ರರು

gurudwara
18/06/2022

ಕಾಬೂಲ್ : ಕರ್ತೇಪರ್ವಾಲ್ ಗುರುದ್ವಾರದಲ್ಲಿ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ  ಇಬ್ಬರು ಸಾವನ್ನಪ್ಪಿದ್ದು, ಬಂದೂಕುಧಾರಿಗಳು ಹಲವರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಸಿಖ್ಖರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಇಂದು ಬೆಳಗ್ಗೆ ಭಾರತೀಯ ಕಾಲಮಾನ 8:30ಕ್ಕೆ ಉಗ್ರರು ಗುರುದ್ವಾರ ತಲುಪಿದ್ದಾರೆ.  ಈ ವೇಳೆ ಮೂವತ್ತು ಭಕ್ತಾದಿಗಳು ಪ್ರಾರ್ಥನೆಗಾಗಿ ಗುರುದ್ವಾರಕ್ಕೆ ಬಂದಿದ್ದರು.

ಸ್ಫೋಟ  ನಡೆದ ತಕ್ಷಣ ಹದಿನೈದು ಮಂದಿ ಸ್ಥಳದಿಂದ ಓಡಿ ಜೀವ ಉಳಿಸಿಕೊಂಡಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಮೂವರು ಗಾಯಗೊಂಡಿದ್ದಾರೆ.  ಉಳಿದವರನ್ನು ಉಗ್ರರು ಒತ್ತೆಯಾಳಾಗಿ ಇರಿಸಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೋ ಪಾರ್ಕಿಂಗ್ ನಲ್ಲಿ ಕಾರು ನಿಲ್ಲಿಸಿದವರ ಮಾಹಿತಿ ನೀಡಿದವರಿಗೆ 500 ರೂ. ಬಹುಮಾನ!

ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಮನೆಗೆ ಎಸಿಬಿ ದಾಳಿ: ಸಿಕ್ಕಿದ  ಚಿನ್ನಾಭರಣಗಳೆಷ್ಟು ಗೊತ್ತಾ?

ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ಫಲಿತಾಂಶ ನೋಡುವುದು ಹೇಗೆ?

ಸಾಯಿ ಪಲ್ಲವಿ ನಟನೆಯ  ‘ವಿರಾಟ ಪರ್ವಂ’ ಬಹಿಷ್ಕಾರಕ್ಕೆ ಬಲಪಂಥೀಯರ ಕರೆ!

ಮಠದ ಸ್ನಾನದ ಗೃಹದಲ್ಲಿ ಸ್ವಾಮೀಜಿಯ ಅನುಮಾನಾಸ್ಪದ ಸಾವು!

ಇತ್ತೀಚಿನ ಸುದ್ದಿ