ಧರ್ಮಸ್ಥಳಕ್ಕೆ ಭೇಟಿ ನೀಡಿದ ಎಸ್ ಐಟಿ  ಅಧಿಕಾರಿಗಳು: ತನಿಖೆ ಆರಂಭ - Mahanayaka
11:48 AM Saturday 28 - February 2026

ಧರ್ಮಸ್ಥಳಕ್ಕೆ ಭೇಟಿ ನೀಡಿದ ಎಸ್ ಐಟಿ  ಅಧಿಕಾರಿಗಳು: ತನಿಖೆ ಆರಂಭ

dharmastala police
26/07/2025

ಬೆಳ್ತಂಗಡಿ: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿರುವ ನೂರಾರು ಹತ್ಯೆ ಪ್ರಕರಣಗಳ ಸಂಬಂಧ ತನಿಖೆ ನಡೆಸಲು ಸರ್ಕಾರ ನಿಯೋಜಿಸಿರುವ ವಿಶೇಷ ತನಿಖಾ ತಂಡ(SIT) ಇಂದು ಧರ್ಮಸ್ಥಳ ಠಾಣೆಗೆ ಆಗಮಿಸಿ ದಾಖಲೆಗಳನ್ನು ಪಡೆದುಕೊಂಡಿದೆ.

ಎಸ್ ಐಟಿಯ ಜಿತೇಂದ್ರ ಕುಮಾರ್ ದಯಾಮ ಹಾಗೂ ಇತರ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿದರು. ಧರ್ಮಸ್ಥಳ ಠಾಣೆಯ ಪಿಎಸ್ ಐ ಸಮರ್ಥ್ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಶುಕ್ರವಾರದಿಂದಲೇ ಅಧಿಕೃತವಾಗಿ ತನಿಖಾ ಕಾರ್ಯ ಆರಂಭವಾಗಿದೆ ಎನ್ನಲಾಗಿದೆ. ಈ ಮೂಲಕ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿರುವ ಬಹುದೊಡ್ಡ ಅಪರಾಧ ಪ್ರಕರಣದ ತನಿಖೆ ಕಾರ್ಯ ಆರಂಭಗೊಂಡಂತಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ