ತಮಿಳುನಾಡಿನಲ್ಲಿ ರೈಲ್ವೆ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ: ಕಲ್ಲು ತೂರಾಟ

ಚೆನ್ನೈನ ಪಟ್ಟರವಕ್ಕಂ ರೈಲ್ವೆ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಪರಸ್ಪರ ಕಲ್ಲು ತೂರಾಟ ನಡೆದಿದೆ. ಪರಿಣಾಮ ರೈಲ್ವೆ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಈ ಘಟನೆಗೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ.
ತಮಿಳುನಾಡಿನ ರಾಜಧಾನಿ ಅಂಬತ್ತೂರು ಬಳಿಯ ಪಟ್ಟರವಕ್ಕಂ ರೈಲ್ವೆ ನಿಲ್ದಾಣದಲ್ಲಿ ಹಿಂಸಾಚಾರ ಸಂಭವಿಸಿದೆ. ರೈಲಿನೊಳಗೆ ಸುಮಾರು 30 ಮಂದಿ ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ಕಲ್ಲು ತೂರಾಟ ಮತ್ತು ಮರದ ಕೋಲುಗಳನ್ನು ಪರಸ್ಪರ ಎಸೆಯಲು ಪ್ರಾರಂಭಿಸಿದರು.
ಭಯಭೀತರಾದ ಪ್ರಯಾಣಿಕರು ಆರ್ ಪಿಎಫ್ಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ತಲುಪಿ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಹಿಂಸಾಚಾರವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು ದೃಶ್ಯಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ.
ಪ್ರಾಥಮಿಕ ತನಿಖೆಯಲ್ಲಿ ಈ ವಿದ್ಯಾರ್ಥಿಗಳು ಪಚೈಯಪ್ಪನ್ ಕಾಲೇಜು ಮತ್ತು ಪ್ರೆಸಿಡೆನ್ಸಿ ಕಾಲೇಜಿಗೆ ಸೇರಿದವರು ಎಂದು ತಿಳಿದುಬಂದಿದೆ.
ಹಿಂಸಾಚಾರದ ನಂತರ ತಪ್ಪಿಸಿಕೊಂಡ ಇತರರನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ. ತನಿಖೆ ನಡೆಯುತ್ತಿದೆ.