ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಹೆಡ್ ಕಾನ್ಸ್ ಟೇಬಲ್ ವಿರುದ್ಧ ಗಂಭೀರ ಆರೋಪ - Mahanayaka
10:13 PM Tuesday 16 - September 2025

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಹೆಡ್ ಕಾನ್ಸ್ ಟೇಬಲ್ ವಿರುದ್ಧ ಗಂಭೀರ ಆರೋಪ

suhas shetty (1)
06/05/2025

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧವೇ ಸುಹಾಸ್ ತಾಯಿ ಅನುಮಾನ ವ್ಯಕ್ತಪಡಿಸಿದ್ದರು. ಇದೇ ಅನುಮಾನವನ್ನು ಹಿಂದುತ್ವ ಸಂಘಟನೆಗಳ ಮುಖಂಡರಾದ ಶರಣ್ ಪಂಪ್ ವೆಲ್ ಮತ್ತು ಕೆ.ಟಿ.ಉಲ್ಲಾಸ್ ವ್ಯಕ್ತಪಡಿಸಿದ್ದಾರೆ.


Provided by

ಸುಹಾಸ್ ಹತ್ಯೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ರಶೀದ್ ಭಾಗಿಯಾಗಿರುವ ಬಗ್ಗೆ ಹಿಂದುತ್ವ ಸಂಘಟನೆಗಳು ಅನುಮಾನ ವ್ಯಕ್ತಪಡಿಸಿದ್ದು, ಅವರನ್ನು ವಿಚಾರಣೆಗೊಳಪಡಿಸಬೇಕು ಅಂತ ಒತ್ತಾಯ ಮಾಡಿವೆ.

ಸುಹಾಸ್ ಬಜಪೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಸುಹಾಸ್ ರನ್ನು ಆಗಾಗ ಠಾಣೆಗೆ ಕರೆದು ಪೊಲೀಸರು ಕಿರುಕುಳ ನೀಡುತ್ತಿದ್ದರು. ಕಾನ್ಸ್ ಟೇಬಲ್ ರಶೀದ್ ಪದೇ ಪದೇ ಕರೆದು ಕಿರುಕುಳ ನೀಡುತ್ತಿದ್ದರು ಎಂದು ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಯಾದ ದಿನವೂ ನೀನು ಮಾರಕಾಸ್ತ್ರ ಇಟ್ಟುಕೊಳ್ಳಬೇಡ, ನಿನ್ನ ಜೊತೆ ಯಾರೂ ಯುವಕರು ಇರಬಾರದು, ಹೆಚ್ಚಿಗೆ ಓಡಾದ ಬೇಡ ಎಂದು ಎಚ್ಚರಿಕೆ ಕೊಟ್ಟಿದ್ದರು ಎಂದು ಆರೋಪಿಸಲಾಗಿದೆ.

ಹೆಡ್ ಕಾನ್ಸ್ ಟೇಬಲ್ ರಶೀದ್ ಸುಹಾಸ್ ನಿರಾಯುಧನಾಗಿರುವ ಮಾಹಿತಿ ಹಂತಕರಿಗೆ ರವಾನಿಸಿದ್ದಾರೆ, ಸುಹಾಸ್ ನ ಚಲನವಲನಗಳ ಮಾಹಿತಿ ನೀಡಿದ್ದಾರೆ ಎನ್ನುವ ಆರೋಪವನ್ನು ವಿಎಚ್ ಪಿ ಪ್ರಾಂತ ಸಂಚಾಲಕ ಶರಣ್ ಪಂಪ್ ವೆಲ್ ಮತ್ತು ಹಿಂದೂ ಜಾಗರಣಾ ವೇದಿಕೆ ಪ್ರಾಂತ ಸಂಚಾಲಕ ಕೆ.ಟಿ.ಉಲ್ಲಾಸ್ ಆರೋಪ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ