ಸುರತ್ಕಲ್ ಟೋಲ್ ಗೇಟ್ ಅನಧಿಕೃತ  ಎಂದು ಸರ್ಕಾರ ಒಪ್ಪಿಕೊಂಡಿದೆ: ಯು.ಟಿ.ಖಾದರ್ - Mahanayaka
2:42 PM Sunday 14 - September 2025

ಸುರತ್ಕಲ್ ಟೋಲ್ ಗೇಟ್ ಅನಧಿಕೃತ  ಎಂದು ಸರ್ಕಾರ ಒಪ್ಪಿಕೊಂಡಿದೆ: ಯು.ಟಿ.ಖಾದರ್

u t khadar
18/10/2022

ಸುರತ್ಕಲ್: ಟೋಲ್ ಗೇಟ್ ಮುತ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ತಕ್ಷಣ ಹೋರಾಟಗಾರರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಕರೆದು ಚರ್ಚಿಸಲಿ ವಿಪಕ್ಷ ಉಪನಾಯಕ, ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.


Provided by

ಸುರತ್ಕಲ್ ಟೋಲ್ ಗೆ ಬಗ್ಗೆ ನಾನು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದಾಗಲೇ ಸರಕಾರವು ಇದನ್ನು ಅನಧಿಕೃತ ಹಾಗೂ ನಿಯಮ ಬಾಹಿರ ಎಂದು ಒಪ್ಪಿಕೊಂಡಿತ್ತು.ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಟೋಲ್ ಗೇಟ್ ತೆಗೆಯಲು ಸಮಯಾವಕಾಶ ಬೇಕೆಂದು ಹೇಳಿತ್ತು.ತಕ್ಷಣ ಜಿಲ್ಲಾಧಿಕಾರಿಗಳು ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಟೋಲ್ ತೆರವುಗೊಳಿಸಲು ಇದ್ದ ತಾಂತ್ರಿಕ ಕಾರಣಗಳನ್ನು ನಿವಾರಿಸಬೇಕಿತ್ತು.ಆದರೆ ಜಿಲ್ಲಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದೇ ಇಷ್ಷೆಲ್ಲಾ ಗೊಂದಲಗಳಿಗೆ ಕಾರಣ ಎಂದು ಖಾದರ್ ಅಭಿಪ್ರಾಯ ಪಟ್ಟರು.

ತಕ್ಷಣ ಜಿಲ್ಲಾಧಿಕಾರಿಗಳು ಹೋರಾಟಗಾರರ ಹಕ್ಕನ್ನು ಪೊಲೀಸ್ ಇಲಾಖೆಯ ಮೂಲಕ ಹತ್ತಿಕ್ಕದೇ ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದು ಕೊಂಡು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು,ಜನಪ್ರತಿನಿಧಿಗಳು ಹಾಗೂ ಹೋರಾಟಗಾರರನ್ನೊಳಗೊಂಡ ಸಭೆ ಕರೆಯಬೇಕೆಂದು ಜಿಲ್ಲಾಧಿಕಾರಿಗಳಿಗೆ ಯು.ಟಿ.ಖಾದರ್ ಒತ್ತಾಯಿಸಿದರು.

ಅಲ್ಲದೇ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರಾದ ನಳೀನ್ ಕುಮಾರ್ ಕಟೀಲು ರವರು ಗೊಂದಲಗಳನ್ನು ನಿವಾರಿಸಬೇಕೇ ಹೊರತು ಈ ಬಗ್ಗೆ ಕೋರ್ಟಿಗೆ ಹೋಗುತ್ತೇನೆಂಬ ಹೇಳಿಕೆ ನೀಡಿ ಜನರನ್ನು ಇನ್ನಷ್ಟು ಗೊಂದಲಕ್ಕೀಡು ಮಾಡುವುದು ಸರಿಯಲ್ಲ ಎಂದು ಯು.ಟಿ.ಖಾದರ್ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ