ಸುರೇಂದ್ರ ಹತ್ಯೆ ಆರೋಪಿಗೆ ಎನ್ ಕೌಂಟರ್ ಭೀತಿ? | ಸಾಮಾಜಿಕ ಜಾಲತಾಣಗಳಲ್ಲಿ ಪತ್ರ ವೈರಲ್!
ಬಂಟ್ವಾಳ: ರೌಡಿಶೀಟರ್, ಚಿತ್ರನಟ ಸುರೇಂದ್ರ ಹತ್ಯೆ ಆರೋಪಿಗಳು ಎನ್ ಕೌಂಟರ್ ಭೀತಿಯಲ್ಲಿದ್ದಾರೆ ಎನ್ನುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದು ವರದಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜೈಲಿನಲ್ಲಿರುವ ಆಕಾಶಭವನ ಶರಣ್ ಎಂಬಾತನ ವಿಚಾರಣೆಗಾಗಿ ಬಾಡಿ ವಾರೆಂಟ್ ಕೇಳಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಕರೆತರುವ ವೇಳೆ ತನ್ನ ಎನ್ ಕೌಂಟರ್ ಮಾಡುವ ಆತಂಕವಿದೆ ಎಂದು ಆತ ಪತ್ರ ಬರೆದಿದ್ದಾನೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಈ ಪತ್ರ ನಿಜವೇ ಎನ್ನುವುದು ಇನ್ನೂ ತಿಳಿದು ಬಂದಿಲ್ಲ ಎಂದು ಹೇಳಲಾಗುತ್ತಿದೆ. ಸುರೇಂದ್ರ ಹತ್ಯೆ ಬೆನ್ನಲ್ಲೇ ಸುರೇಂದ್ರನ ಬಗ್ಗೆ ಹಲವಾರು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಸುರೇಂದ್ರ ಬಡವರಿಗೆ ಬಡ್ಡಿ ಹಾಕಿ ಹಣ ಮಾಡಿದ ಎಂಬಂತೆಲ್ಲ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈಗ ಪತ್ರವೊಂದು ಹರಿದಾಡುತ್ತಿದೆ ಎಂದು ವರದಿಯಾಗಿದೆ.
ಸುರೇಂದ್ರ ಹತ್ಯೆ ಪ್ರಕರಣವನ್ನು ಸಮರ್ಥಿಸುತ್ತಿರುವವರು ಯಾರು? ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ. ಈ ನಡುವೆ ಪೊಲೀಸರ ವಶದಲ್ಲಿರುವ ವ್ಯಕ್ತಿ ಬರೆದ ಪತ್ರ ವೈರಲ್ ಆಗಿದ್ದು ಹೇಗೆ? ಮೊದಲಾದ ಪ್ರಶ್ನೆಗಳು ಕೇಳಿ ಬಂದಿವೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.