10:48 PM Thursday 13 - August 2026

ಲಂಚದ ಹುಚ್ಚಾಟ: ತಾ.ಪಂ. ತಾಂತ್ರಿಕ ಸಹಾಯಕಿ ವೆಂಕಿಬಾಯಿ ಲೋಕಾಯುಕ್ತ ಬಲೆಗೆ

venkibai
13/05/2025

ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಇನ್ನೊಂದು ಎಚ್ಚರಿಕೆಯ ಘಟನೆಯು ಬೆಳಕಿಗೆ ಬಂದಿದೆ.

ಅಜ್ಜಂಪುರ ತಾ.ಪಂನಲ್ಲಿ ತಾಂತ್ರಿಕ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಿಬಾಯಿ, ಕೃಷಿ ಹೊಂಡ ಕೊರೆಸುವ ಸಲುವಾಗಿ ರೈತನೊಬ್ಬನಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಖಚಿತವಾಗಿದೆ.

ನಾಗವಂಗಲದ ಕೃಷಿಕನೊಬ್ಬರಿಂದ ರೂ. 5,500 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ತಾವು ಪೂರ್ವಪ್ರಣಾಳಿಕೆಯಂತೆ ನಡೆಸಿದ ಕಾರ್ಯಾಚರಣೆಯಲ್ಲಿ ವೆಂಕಿಬಾಯಿಯನ್ನು ಸೆರೆಹಿಡಿದಿದ್ದಾರೆ.

ತಾ.ಪಂ. ಕಚೇರಿಯೊಳಗೇ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ವೆಂಕಿಬಾಯಿ ಲಂಚ ಸ್ವೀಕರಿಸುತ್ತಿರುವ ವೇಳೆ ವೆಂಕಿಬಾಯಿ ಸಿಕ್ಕಿಬಿದ್ದಿದ್ದಾರೆ.
ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಡಿವೈಎಸ್ ಪಿ ಜೆ.ಜೆ ತಿರುಮಲೇಶ್ ಅವರ ನೇತೃತ್ವದಲ್ಲಿ ಸ್ಥಳೀಯ ತಂಡ ನಡೆಸಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version