ಭೀಕರ ರಸ್ತೆ ಅಪಘಾತ: ಐವರು ಸ್ಥಳದಲ್ಲೇ ಸಾವು

21/05/2025
ವಿಜಯಪುರ: ಸ್ಕಾರ್ಪಿಯೋ ಕಂಟೇನರ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ಳಂಬೆಳಗ್ಗೆ ನಡೆದಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಭೀಕರ ಅಪಘಾತ ನಡೆದಿದೆ.
ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್ನಲ್ಲಿದ್ದ ಒಬ್ಬ ಸ್ಥಳದಲ್ಲೇ ಮೃತಪಟ್ಟವರು ಎಂದು ತಿಳಿದು ಬಂದಿದೆ. ಹಲವರು ಗಾಯಗೊಂಡಿದ್ದಾರೆ.
ಮೃತರ ಹೆಸರು ಮತ್ತು ಮಾಹಿತಿ ಲಭ್ಯವಾಗಬೇಕಿದೆ. ಅಪಘಾತದ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಬಂದ ಮನಗೂಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD