ನದಿ ದಂಡೆಯಲ್ಲಿ ಯುವತಿಯ ಮೃತದೇಹ ಪತ್ತೆ | ಅತ್ಯಾಚಾರ-ಕೊಲೆಯ ಶಂಕೆ
ತಂಜೂರು: ತಮಿಳುನಾಡಿನ ತಂಜೂರು ಜಿಲ್ಲೆಯ ತಿರುಕಟ್ಟುಪಲ್ಲಿ ಎಂಬಲ್ಲಿನ ಕೊಲ್ಲಿಡಂ ನದಿ ದಂಡೆಯಲ್ಲಿ ಯುವತಿಯೊಬ್ಬಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೀಗ ಯುವತಿಯ ಸಾವಿನ ಬಗ್ಗೆ ನಾನಾ ರೀತಿಯ ಅನುಮಾನಗಳು ಆರಂಭವಾಗಿದೆ.
ಗ್ರಾಮಸ್ಥರು ಯುವತಿಯ ಮೃತದೇಹವನ್ನು ಮೊದಲು ನೋಡಿದ್ದಾರೆ. ಸುಮಾರು 25 ವರ್ಷದ ಯುವತಿಯ ಮೃತದೇಹ ಇದಾಗಿದೆ. ಮೃತದೇಹದ ಮೇಲೆ ಯಾವುದೇ ಬಟ್ಟೆ ಕೂಡ ಇಲ್ಲವಾಗಿರುವುದರಿಂದ ಅತ್ಯಾಚಾರ ಎಸಗಿ ಹತ್ಯೆ ಮಾಡಿ, ಮೃತದೇಹ ನದಿಯ ಬದಿಯಲ್ಲಿ ಹೂತು ಹಾಕಲಾಗಿದೆಯೇ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ. ಯುವತಿಯ ಸಾವಿಗೆ ಕಾರಣ ಏನು ಎಂಬ ಬಗ್ಗೆ ಮಾಹಿತಿ ಪಡೆದು ಪೊಲೀಸರು ಮುಂದಿನ ಕ್ರಮಕೈಗೊಳ್ಳಲಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.