ಸರ್ಕಾರ ಬೀಳಿಸಲು ಆಗಲ್ಲ, ಹೆಚ್ಚು ಕಡಿಮೆ ಆದ್ರೆ ಬಿಜೆಪಿನೂ ಇರಲ್ಲಾ- ದಳನೂ ಇರಲ್ಲ: ಶಾಸಕ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಡಿಕೆಶಿ ಹೇಳಿರುವ ಬಗ್ಗೆ ಹೆಚ್ಚು ಮಾಹಿತಿ ಇಲ್ಲಾ, ಆದರೆ ಸರ್ಕಾರ ಬೀಳಿಸಲು ಸಾಧ್ಯವಿಲ್ಲ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಚಾಮರಾಜನಗರದಲ್ಲಿ ಮಾಧ್ಯಮದವರೊಟ್ಟಿಗೆ ಅವರು ಮಾತನಾಡಿ, ರಾತ್ರಿ ಕಂಡ ಬಾವಿಗೆ ಯಾರೂ ಹಗಳಲ್ಲಿ ಬೀಳಲ್ಲ, ಬಿಜೆಪಿ ಕುತಂತ್ರ ಈಗಾಗಲೇ ಜಗಜ್ಜಾಹೀರಾಗಿದೆ, ಹೆಚ್ಚು ಕಡಿಮೆ ಆದರೆ ಬಿಜೆಪಿನೂ ಬಿದ್ದೋಗತ್ತೆ, ದಳನೂ ಇರಲ್ಲಾ ಎಂದರು.
ಮೈಸೂರು ಹಾಗೂ ಚಾಮರಾಜನಗರವನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕೆಂದು ಕಂದಾಯ ಸಚಿವ ಕೃಷ್ಣಬೈರೇಗೌಡಗೆ ಮನವಿ ಮಾಡಿದ್ದೇನೆ, 20% ಮಳೆ ಕಡಿಮೆಯಾಗಿದ್ದು ಈಗ ಬೀಳುತ್ತಿರುವ ಮಳೆಯಿಂದಲೂ ಬೆಳೆ ಕೈ ಸೇರುವುದಿಲ್ಲ ಎಂದು ಇದೇ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw