ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ತಂಪೆರೆದ ಮಳೆರಾಯ!

rain
17/03/2024

ಚಿಕ್ಕಮಗಳೂರು:  ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ಮಳೆರಾಯ ತಂಪೆರೆದಿದ್ದು,  ಐದಳ್ಳಿ, ಕಣತಿ, ಮಾಗೋಡು ಹುಣಸೇಹಳ್ಳಿ, ಕಡಬಗೆರೆ  ಸುತ್ತಮುತ್ತ ಮಳೆ ಸುರಿದಿದೆ.

ಸಾಧಾರಣಕ್ಕಿಂತ ಜೋರಾಗೇ ಸುರಿದ  ಮಳೆಯಿಂದ ಜನರಲ್ಲಿ ಸಂತಸ ಮೂಡಿಸಿದೆ.  ಮಧ್ಯಾಹ್ನದ ನಂತರ ಮೋಡ ಕವಿದ ವಾತವರಣವಿತ್ತು, ಬಿಸಿಲ ಧಗೆಗೆ ಕಾಫಿ-ಮೆಣಸು ಉಳಿಸಿಕೊಳ್ಳೋದೆ ಸವಾಲಾಗಿತ್ತು.

ಮಳೆಯಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ.  ಕಳೆದ ಐದು ದಿನದ ಹಿಂದೆ  ಚಿಕ್ಕಮಗಳೂರು ಜಿಲ್ಲೆಯಲ್ಲಿ  ಮೊದಲ ಮಳೆಯಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version