ಮಾಜಿ ಶಾಸಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ: ತಪ್ಪೊಪ್ಪಿಗೆ ಹೇಳಿಕೆ ಹಿಂಪಡೆದ ಮೂವರು ಆರೋಪಿಗಳು - Mahanayaka
5:01 PM Wednesday 12 - February 2025

ಮಾಜಿ ಶಾಸಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ: ತಪ್ಪೊಪ್ಪಿಗೆ ಹೇಳಿಕೆ ಹಿಂಪಡೆದ ಮೂವರು ಆರೋಪಿಗಳು

04/02/2025

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಮೂವರು ಆರೋಪಿಗಳು ಮುಂಬೈನ ವಿಶೇಷ ನ್ಯಾಯಾಲಯದ ಮುಂದೆ ತಪ್ಪೊಪ್ಪಿಗೆ ಹೇಳಿಕೆಗಳನ್ನು ಹಿಂಪಡೆದಿದ್ದಾರೆ. ಆರೋಪಿಗಳಲ್ಲಿ ಓರ್ವನಾದ ಮತ್ತು ಶೂಟರ್ ಎಂದು ಹೇಳಲಾದ ಶಿವಕುಮಾರ್ ಅಲಿಯಾಸ್ ಶಿವ ಬಲ್ಕಿಶನ್ ಗೌತಮ್ ತನ್ನನ್ನು ತಪ್ಪೊಪ್ಪಿಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ಹೇಳಿಕೊಂಡಿದ್ದಾನೆ.

ತಪ್ಪೊಪ್ಪಿಕೊಳ್ಳದಿದ್ದರೆ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಹೆಚ್ಚುವರಿ ಆರೋಪಗಳನ್ನು ಹೊರಿಸುವುದಾಗಿ ತನಿಖಾ ಸಂಸ್ಥೆ ಬೆದರಿಕೆ ಹಾಕಿದೆ ಎಂದು ಗೌತಮ್ ಆರೋಪಿಸಿದ್ದಾರೆ ಎಂದು ಗೌತಮ್ ಅವರ ವಕೀಲ ಅಜಿಂಕ್ಯ ಮಿರ್ಗಲ್ ಹೇಳಿದ್ದಾರೆ.
ಸಿದ್ದಿಕಿ ಅವರ ಹತ್ಯೆಯನ್ನು ಒಪ್ಪಿಕೊಳ್ಳದಿದ್ದರೆ ಗೌತಮ್ ಅವರ ಕುಟುಂಬವನ್ನು ಅನೇಕ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ತನಿಖಾ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ ಎಂದು ಗೌತಮ್ ಅವರ ವಕೀಲರು ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ