ಸಾಮಾನ್ಯ ಜನರಿಗಾಗಿ ಸರ್ಕಾರದ ಬೊಕ್ಕಸವನ್ನು ತೆರೆಯುವ ಸಮಯ ಬಂದಿದೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ - Mahanayaka
10:39 AM Friday 11 - September 2026

ಸಾಮಾನ್ಯ ಜನರಿಗಾಗಿ ಸರ್ಕಾರದ ಬೊಕ್ಕಸವನ್ನು ತೆರೆಯುವ ಸಮಯ ಬಂದಿದೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

09/04/2024

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಕೋಟ್ಯಂತರ ‘ಬಿಲಿಯನೇರ್ ಸ್ನೇಹಿತರ’ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಈಗ ಸಾಮಾನ್ಯ ಜನರಿಗೆ ಸರ್ಕಾರದ ಬೊಕ್ಕಸವನ್ನು ತೆರೆಯುವ ಸಮಯ ಬಂದಿದೆ ಎಂದು ಪ್ರತಿಪಾದಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ಶತಕೋಟ್ಯಾಧಿಪತಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಒಂದೇ ಬಾರಿಗೆ ಮನ್ನಾ ಮಾಡಿದ್ದಾರೆ ಮತ್ತು ಇಷ್ಟು ಹಣದಿಂದ ಎಂಜಿಎನ್ಆರ್ ಇಜಿಎಯಂತಹ ಕ್ರಾಂತಿಕಾರಿ ಯೋಜನೆಯನ್ನು 24 ವರ್ಷಗಳ ಕಾಲ ನಡೆಸಬಹುದಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನರೇಂದ್ರ ಮೋದಿ ಅವರು ಒಂದೇ ಬಾರಿಗೆ ಕೆಲವು ಶತಕೋಟ್ಯಾಧಿಪತಿಗಳ 16 ಲಕ್ಷ ಕೋಟಿ ರೂ.ಗಳನ್ನು ಮನ್ನಾ ಮಾಡಿದ್ದಾರೆ. ಇಷ್ಟು ಹಣದಿಂದ ಎಂಜಿಎನ್ಆರ್ ಇಜಿಎಯಂತಹ ಕ್ರಾಂತಿಕಾರಿ ಯೋಜನೆಯನ್ನು 24 ವರ್ಷಗಳ ಕಾಲ ನಡೆಸಬಹುದಿತ್ತು. ಕಾಂಗ್ರೆಸ್ನ ಯೋಜನೆಗಳಿಗೆ ಹಣ ಎಲ್ಲಿಂದ ಬರುತ್ತದೆ ಎಂದು ಕೇಳುವವರು ಈ ಅಂಕಿಅಂಶಗಳನ್ನು ನಿಮ್ಮಿಂದ ಮರೆಮಾಚುತ್ತಾರೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

‘ಸ್ನೇಹಿತರ ಬಗ್ಗೆ ದಯೆ’ ಸಾಕು. ಈಗ ಸಾಮಾನ್ಯ ಜನರಿಗೆ ಸರ್ಕಾರದ ಬೊಕ್ಕಸವನ್ನು ತೆರೆಯುವ ಸಮಯ” ಎಂದು ಅವರು ಹೇಳಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti