ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ | ಗಾಯಗೊಂಡ ಕಾರ್ಯಕರ್ತನ ಸ್ಥಿತಿ ಚಿಂತಾಜನಕ - Mahanayaka

ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ | ಗಾಯಗೊಂಡ ಕಾರ್ಯಕರ್ತನ ಸ್ಥಿತಿ ಚಿಂತಾಜನಕ

25/10/2020

ಹೌರಾ:  ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ನಡೆದಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.

ಟಿಎಂಸಿ ಕಾರ್ಯಕರ್ತನೊಬ್ಬ ಈ ದಾಳಿ ನಡೆಸಿದ್ದಾನೆ ಎಂದು ಹೇಳಲಾಗಿದೆ. ಈ ಘಟನೆಯನ್ನು ರಾಜಕೀಯ ಹಿಂಸಾಚಾರ ಎಂದು ಬಿಜೆಪಿ ಕರೆದ ಬಿಜೆಪಿ ಕಾರ್ಯಕರ್ತರು ಟಿಎಂಸಿ ಕಾರ್ಯಕರ್ತನ ಮನೆ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿದ್ದಾರೆ.

ಈ ಸಂಬಂಧ ಮಾಹಿತಿ ನೀಡಿರುವ ಪೊಲೀಸರು, ಇದು ರಾಜಕೀಯ ದಾಳಿ ಎನ್ನುವುದನ್ನು ತಳ್ಳಿ ಹಾಕಿದ್ದಾರೆ.  ಈ ಇಬ್ಬರೂ ನೆರೆ ಹೊರೆಯವರಾಗಿದ್ದಾರೆ. ಭೂ ವಿವಾದವೇ ಈ ದಾಳಿಗೆ ಕಾರಣ ಎಂದು ತಿಳಿಸಿದ್ದಾರೆ.

ಬಾಗ್ನಾನ್ ಪೊಲೀಸ್ ಠಾಣೆ ಪ್ರದೇಶದ ಚಂದನಪರದಲ್ಲಿ ಈ ಘಟನೆ ನಡೆದಿದ್ದು, 52 ವರ್ಷದ ಹೂವಿನ ವ್ಯಾಪಾರಿ ಕಿಂಕರ್ ಮಾಝಿ ಶನಿವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ, ಅವರನ್ನು ತಡೆದ ಟಿಎಂಸಿ ಕಾರ್ಯಕರ್ತ ಹಾಗೂ ಇತರೆ ವ್ಯಕ್ತಿಗಳು ತುಂಬಾ ಹತ್ತಿರದಿಂದಲೇ ಗುಂಡು ಹಾರಿಸಿದ್ದಾರೆ.

ಮಹಾನಾಯಕ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ

https://t.me/joinchat/Q8oMxBZkakVUy7-VpEsIXQ

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ