ಆನೆಯ ಹಿಂಡಿನೊಂದಿಗೆ ಬಂದ ಮರಿ ಆನೆ ತೋಟದಲ್ಲಿಯೇ ಉಳಿಯಿತು | ಮುಂದೇನಾಯ್ತು ನೋಡಿ
ಉಜಿರೆ: ಆನೆಗಳ ಹಿಂಡಿನ ಜೊತೆಗೆ ಆಹಾರ ಸೇವಿಸಲು ಬಂದಿದ್ದ ಮರಿಯಾನೆ ಗುಂಪಿನಿಂದ ತಪ್ಪಿ ತೋಟದಲ್ಲಿಯೇ ಉಳಿದ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ.
ಈ ಗ್ರಾಮದ ನಿವಾಸಿ ಡೀಕಯ್ಯ ಗೌಡ ಅವರ ತೋಟಕ್ಕೆ ನುಗ್ಗಿದ್ದ ಆನೆಗಳ ಹಿಂಡು ರಾತ್ರಿ ಕೃಷಿಯನ್ನು ಹಾನಿ ಮಾಡಿದೆ.. ಆ ಬಳಿಕ ಆನೆಗಳು ಮರಳಿ ಹೋಗಿವೆ. ಈ ಸಂದರ್ಭದಲ್ಲಿ ಮರಿಯಾನೆಯೊಂದು ಇಲ್ಲಿಯೇ ಉಳಿದಿದೆ.
ತೋಟದ ಮಾಲಿಕ ತೋಟಕ್ಕೆ ಹೋದ ಸಂದರ್ಭದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ ಅವರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿ ತ್ಯಾಗರಾಜ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಸುಮಾರು 2 ತಿಂಗಳು ಪ್ರಾಯದ ಮರಿ ಆನೆ ಇದಾಗಿದೆ. ಇದು ಇಲ್ಲಿಯೇ ಬಾಕಿಯಾಗಿರುವ ಹಿನ್ನೆಲೆಯಲ್ಲಿ ಆನೆಗಳ ಹಿಂಡು ಮತ್ತೆ ಬರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಹೇಳಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದಿರುವಂತೆ ಸೂಚಿಸಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.