ಬಿಜೆಪಿ ಸಂಸದ ಸುವೇಂದು ಅಧಿಕಾರಿ ವಿರುದ್ಧ ಮಹಿಳಾ ಆಯೋಗಕ್ಕೆ ತೃಣಮೂಲ ಪಕ್ಷದಿಂದ ದೂರು

25/04/2024

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ಮುಖಂಡ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತೃಣಮೂಲ ಕಾಂಗ್ರೆಸ್ನ ಮಹಿಳಾ ವಿಭಾಗ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್ಸಿಡಬ್ಲ್ಯೂ) ಪತ್ರ ಬರೆದಿದೆ.

ರಾಜ್ಯ ಸಚಿವೆ ಮತ್ತು ತೃಣಮೂಲ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ಅವರು ಆಯೋಗಕ್ಕೆ ನೀಡಿದ ದೂರಿನಲ್ಲಿ ಬಿಜೆಪಿ ನಾಯಕ ಮಮತಾ ಬ್ಯಾನರ್ಜಿ ವಿರುದ್ಧ “ಪದೇ ಪದೇ ಅವಹೇಳನಕಾರಿ ಪದಗಳು ಮತ್ತು ಕೊಳಕು ಹೇಳಿಕೆಗಳನ್ನು ಬಳಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಇಂತಹ ಪದಗಳ ಬಳಕೆಯು ಅಗೌರವ ಮಾತ್ರವಲ್ಲ, ಅಸಭ್ಯ ಸ್ವಭಾವವೂ ಆಗಿದೆ. ಶ್ರೀಮತಿ ಮಮತಾ ಬ್ಯಾನರ್ಜಿ ದೇಶದ ಏಕೈಕ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಶ್ರೀ ಅಧಿಕಾರಿ ಅಂತಹ ಪದಗಳನ್ನು ಬಳಸುವುದು ಅವರನ್ನು ದೂಷಿಸುವುದಲ್ಲದೆ ಮಹಿಳೆಯರನ್ನು ಅಗೌರವಗೊಳಿಸುತ್ತದೆ” ಎಂದು ದೂರಿನಲ್ಲಿ ಹೇಳಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version